‘ಮಮತಾ ಬ್ಯಾನರ್ಜಿ ಅವರ ಪೊಲೀಸರು ಶೇಖ್ ಶಹಜಹಾನ್ ಅವರನ್ನು ಬಂಧಿಸುವುದಿಲ್ಲ. ಏಕೆಂದರೆ, ಅವರು(ಶೇಖ್) ಅಲ್ಲಿನ ಮತಗಳನ್ನು ನಿಯಂತ್ರಿಸುತ್ತಾರೆ, ಅವರನ್ನು ಬಂಧಿಸಿದರೆ ಟಿಎಂಸಿ ಬಸಿರ್ಹತ್ ಸ್ಥಾನವನ್ನು ಕಳೆದುಕೊಳ್ಳುತ್ತದೆ. ಮಾರ್ಚ್ 6ರಂದು ಸಿಜೆಐ ಅವರ ಪೀಠದಲ್ಲಿ ಪ್ರಕರಣ ಸಂಬಂಧ ವಿಚಾರಣೆ ಇದೆ. ಪ್ರಕರಣವು ಸಿಬಿಐಗೆ ಹೋಗುತ್ತದೆ ಮತ್ತು ಅದಾದ, 24 ಗಂಟೆಗಳ ಒಳಗೆ ಶಹಜಹಾನ್ ಜೈಲಿನಲ್ಲಿರುತ್ತಾನೆ’ಎಂದು ಅವರು ಹೇಳಿದ್ದಾರೆ.
2013ರಲ್ಲಿ ಟಿಎಂಸಿ ಸೇರಿದ ಶಹಜಹಾನ್, ಅದಕ್ಕೂ ಮೊದಲು ಸಿಪಿಐ (ಎಂ)ನಲ್ಲಿ ಇದ್ದರು. ಭೂಮಾಫಿಯಾದಿಂದ ಶೇ 20ರಷ್ಟು ಲಂಚ ವಸೂಲಿ ಮಾಡಿ ವರಿಷ್ಠರಿಗೆ ಕಳುಹಿಸುತ್ತಿದ್ದರು ಎಂದು ಅವರು ಆರೋಪಿಸಿದ್ದಾರೆ.
ಕಳೆದ 10 ವರ್ಷಗಳಲ್ಲಿ ಜಮ್ಮು ಮತ್ತು ಕಾಶ್ಮೀರವನ್ನು ಹೊರತುಪಡಿಸಿ ಬಿಜೆಪಿ ಎಲ್ಲಿಯೂ ರಾಷ್ಟ್ರಪತಿ ಆಳ್ವಿಕೆ ಹೇರಿಲ್ಲ, ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಅಧಿಕಾರ ಬದಲಾವಣೆ ಮಾಡುವುದು ನಮ್ಮ ಪಕ್ಷದ ಉದ್ದೇಶ. ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆಯ ಪರಿಸ್ಥಿತಿ ಇದೆ. ಆದರೆ, ಬಿಜೆಪಿ ನಾಯಕನಾಗಿ ನಾನು ಅದಕ್ಕೆ ಒತ್ತಾಯಿಸುವುದಿಲ್ಲ ಎಂದು ಹೇಳಿದ್ದಾರೆ.