ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಅಪಾಯವಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ ಗೆಲುವು ಸಾಧಿಸಿದರೆ, ಭವಿಷ್ಯದಲ್ಲಿ ಯಾವುದೇ ಚುನಾವಣೆಗಳು ನಡೆಯುವುದಿಲ್ಲ. ನಿಮಗೆ ಮೂಲಭೂತ ಹಕ್ಕುಗಳಿಲ್ಲದಿದ್ದರೆ, ಗುಲಾಮರಾಗುತ್ತೀರಿ ಎಂದು ತಿಳಿಸಿದ್ದಾರೆ.
‘ನೀವು (ಮೋದಿ) ಅದಾನಿ ಹಾಗೂ ಅಂಬಾನಿಯನ್ನು ಏಕೆ ಬಂಧಿಸುತ್ತಿಲ್ಲ? ನಿಮಗೆ ಧೈರ್ಯವಿಲ್ಲ ಆದರೆ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರನ್ನು ಬಂಧಿಸಿದ್ದೀರಿ’ ಎಂದು ಖರ್ಗೆ ವಾಗ್ದಾಳಿ ನಡೆಸಿದ್ದಾರೆ.