<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನದ ವೇಳೆ ಕೆಲವೆಡೆ ಘರ್ಷಣೆ ಹಾಗೂ ಹಿಂಸಾಚಾರದ ಘಟನೆಗಳು ವರದಿಯಾಗಿವೆ ಎಂದು ಪೊಲೀಸರು ಹೇಳಿದ್ದಾರೆ. </p><p>ಬಂಗಾಳದಲ್ಲಿ ಎರಡನೇ ಹಾಗೂ ಕೊನೆ ಹಂತದ ಮತದಾನ ಆರಂಭವಾಗಿದ್ದು, 142 ಕ್ಷೇತ್ರಗಳಲ್ಲಿ ಇಂದು (ಏ.29) ಮತದಾನ ನಡೆಯುತ್ತಿದೆ. </p><p>ಛಪ್ರಾ, ಶಾಂತಿಪುರ, ನಿಮ್ತಾಲಾ ಮತ್ತು ಭಂಗಾರ್ ಕ್ಷೇತ್ರಗಳಲ್ಲಿ ಹಿಂಸಾಚಾರದ ಘಟನೆಗಳು ವರದಿಯಾಗಿವೆ ಎಂದು ತಿಳಿಸಿದ್ದಾರೆ. </p><p>ನಾದಿಯಾ ಜಿಲ್ಲೆಯ ಛಪ್ರಾದಲ್ಲಿರುವ ಬೂತ್ ಸಂಖ್ಯೆ 53ರಲ್ಲಿ ಬಿಜೆಪಿ ಮತಗಟ್ಟೆ ಏಜೆಂಟ್ ಮೇಲೆ ಟಿಎಂಸಿ ಪಕ್ಷದ ಗೂಂಡಾಗಳು ಹಲ್ಲೆ ನಡೆಸಿದ್ದಾರೆ. ಈ ಕುರಿತು ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಸೈಕತ್ ಸರ್ಕಾರ್ ಹೇಳಿದ್ದಾರೆ. </p><p>15ರಿಂದ 16 ಟಿಎಂಸಿ ಕಾರ್ಯಕರ್ತರು, ರಾಡ್ನಿಂದ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಅದರಲ್ಲಿ ಒಬ್ಬನ ಕೈಯಲ್ಲಿ ಬಂದೂಕು ಇತ್ತು ಎಂದು ಗಾಯಾಳು ತಿಳಿಸಿದ್ದಾರೆ. </p><p>ಗಾಯಾಳನ್ನು ಮೊಶರೆಫ್ ಮಿರ್ ಎಂದು ಗುರುತಿಸಲಾಗಿದೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. </p><p>ಶಾಂತಿಪುರದಲ್ಲಿನ ವಾರ್ಡ್ 16ರಲ್ಲಿದ್ದ ಬಿಜೆಪಿಯ ಕ್ಯಾಂಪ್ ಕಚೇರಿಯ ಮೇಲೆ ದಾಳಿ ನಡೆಸಿರುವ ಆರೋಪಿಗಳು, ಅಲ್ಲಿನ ಪಿಠೋಪಕರಣಗಳನ್ನು ನಾಶಪಡಿಸಿದ್ದಾರೆ ಎಂದು ತಿಳಿದ್ದಾರೆ. </p><p>ಮತಗಟ್ಟೆಯ ಬಳಿ ಟಿಎಂಸಿ ಕಾರ್ಯಕರ್ತರೊಂದಿಗೆ ಗುಂಪುಗೂಡಿ ನಿಂತಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತಮ್ಮ ಕಾರ್ತಿಕ್ ಬ್ಯಾನರ್ಜಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಮತಗಟ್ಟೆಯ ಬಳಿ ನಾಲ್ಕಕ್ಕಿಂತ ಹೆಚ್ಚು ಜನರು ಗುಂಪಾಗಿ ನಿಲ್ಲದಂತೆ ಸೂಚಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಏ.23ರಂದು ಮೊದಲ ಹಂತದ ಮತದಾನವಾಗಿತ್ತು. ಆ ವೇಳೆಯೂ ಹಲವೆಡೆ ಹಿಂಸಾಚಾರದ ಘಟನೆಗಳು ವರದಿಯಾಗಿದ್ದವು. </p>.West Bengal Elections: ಎರಡನೇ ಹಂತದಲ್ಲಿ ಶೇ 92.47ರಷ್ಟು ಮತದಾನ.West Bengal Elections| ದಾಖಲೆ ಪ್ರಮಾಣದಲ್ಲಿ ಮತದಾನ ಮಾಡಿ: ಪ್ರಧಾನಿ ಮೋದಿ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನದ ವೇಳೆ ಕೆಲವೆಡೆ ಘರ್ಷಣೆ ಹಾಗೂ ಹಿಂಸಾಚಾರದ ಘಟನೆಗಳು ವರದಿಯಾಗಿವೆ ಎಂದು ಪೊಲೀಸರು ಹೇಳಿದ್ದಾರೆ. </p><p>ಬಂಗಾಳದಲ್ಲಿ ಎರಡನೇ ಹಾಗೂ ಕೊನೆ ಹಂತದ ಮತದಾನ ಆರಂಭವಾಗಿದ್ದು, 142 ಕ್ಷೇತ್ರಗಳಲ್ಲಿ ಇಂದು (ಏ.29) ಮತದಾನ ನಡೆಯುತ್ತಿದೆ. </p><p>ಛಪ್ರಾ, ಶಾಂತಿಪುರ, ನಿಮ್ತಾಲಾ ಮತ್ತು ಭಂಗಾರ್ ಕ್ಷೇತ್ರಗಳಲ್ಲಿ ಹಿಂಸಾಚಾರದ ಘಟನೆಗಳು ವರದಿಯಾಗಿವೆ ಎಂದು ತಿಳಿಸಿದ್ದಾರೆ. </p><p>ನಾದಿಯಾ ಜಿಲ್ಲೆಯ ಛಪ್ರಾದಲ್ಲಿರುವ ಬೂತ್ ಸಂಖ್ಯೆ 53ರಲ್ಲಿ ಬಿಜೆಪಿ ಮತಗಟ್ಟೆ ಏಜೆಂಟ್ ಮೇಲೆ ಟಿಎಂಸಿ ಪಕ್ಷದ ಗೂಂಡಾಗಳು ಹಲ್ಲೆ ನಡೆಸಿದ್ದಾರೆ. ಈ ಕುರಿತು ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಸೈಕತ್ ಸರ್ಕಾರ್ ಹೇಳಿದ್ದಾರೆ. </p><p>15ರಿಂದ 16 ಟಿಎಂಸಿ ಕಾರ್ಯಕರ್ತರು, ರಾಡ್ನಿಂದ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಅದರಲ್ಲಿ ಒಬ್ಬನ ಕೈಯಲ್ಲಿ ಬಂದೂಕು ಇತ್ತು ಎಂದು ಗಾಯಾಳು ತಿಳಿಸಿದ್ದಾರೆ. </p><p>ಗಾಯಾಳನ್ನು ಮೊಶರೆಫ್ ಮಿರ್ ಎಂದು ಗುರುತಿಸಲಾಗಿದೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. </p><p>ಶಾಂತಿಪುರದಲ್ಲಿನ ವಾರ್ಡ್ 16ರಲ್ಲಿದ್ದ ಬಿಜೆಪಿಯ ಕ್ಯಾಂಪ್ ಕಚೇರಿಯ ಮೇಲೆ ದಾಳಿ ನಡೆಸಿರುವ ಆರೋಪಿಗಳು, ಅಲ್ಲಿನ ಪಿಠೋಪಕರಣಗಳನ್ನು ನಾಶಪಡಿಸಿದ್ದಾರೆ ಎಂದು ತಿಳಿದ್ದಾರೆ. </p><p>ಮತಗಟ್ಟೆಯ ಬಳಿ ಟಿಎಂಸಿ ಕಾರ್ಯಕರ್ತರೊಂದಿಗೆ ಗುಂಪುಗೂಡಿ ನಿಂತಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತಮ್ಮ ಕಾರ್ತಿಕ್ ಬ್ಯಾನರ್ಜಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಮತಗಟ್ಟೆಯ ಬಳಿ ನಾಲ್ಕಕ್ಕಿಂತ ಹೆಚ್ಚು ಜನರು ಗುಂಪಾಗಿ ನಿಲ್ಲದಂತೆ ಸೂಚಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಏ.23ರಂದು ಮೊದಲ ಹಂತದ ಮತದಾನವಾಗಿತ್ತು. ಆ ವೇಳೆಯೂ ಹಲವೆಡೆ ಹಿಂಸಾಚಾರದ ಘಟನೆಗಳು ವರದಿಯಾಗಿದ್ದವು. </p>.West Bengal Elections: ಎರಡನೇ ಹಂತದಲ್ಲಿ ಶೇ 92.47ರಷ್ಟು ಮತದಾನ.West Bengal Elections| ದಾಖಲೆ ಪ್ರಮಾಣದಲ್ಲಿ ಮತದಾನ ಮಾಡಿ: ಪ್ರಧಾನಿ ಮೋದಿ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>