<p><strong>ಬೆಂಗಳೂರು</strong>: ‘ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ಕದ್ದು ಪಂಚರಾಜ್ಯಗಳ ಚುನಾವಣೆಯನ್ನು ಪ್ರಧಾನಿ ಮೋದಿ ಎದುರಿಸುತ್ತಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಲೇವಡಿ ಮಾಡಿದರು.</p>.<p>ಕೆಪಿಸಿಸಿ ಕಚೇರಿಯ ‘ಭಾರತ್ ಜೋಡೊ’ ಸಭಾಂಗಣದಲ್ಲಿ ಭಾನುವಾರ ನಡೆದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಜನ್ಮದಿನಾಚರಣೆ ಮತ್ತು ಬೆಂಗಳೂರು ನೂತನ ಜಿಲ್ಲಾ ಘಟಕಗಳ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿದೆಯೇ ಇಲ್ಲವೇ ಎಂದು ತಿಳಿಯಲು ಸಚಿವರಿಗೆ ಸೂಚನೆ ನೀಡಲಾಗಿದೆ. ಇದೇ 28ರಂದು ಕಾಂಗ್ರೆಸ್ ಸಂಸ್ಥಾಪಕರ ದಿನ. ಈ ದಿನದಂದೇ ಪಕ್ಷದ ವತಿಯಿಂದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿದೆಯೇ ಎಂದು ಸಮೀಕ್ಷೆ ಮಾಡಲು ಸಮಿತಿ ರಚಿಸಲಾಗುವುದು’ ಎಂದರು.</p>.<p>‘ಬಿಜೆಪಿ ಮತ್ತು ಜೆಡಿಎಸ್ನವರು ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದವರು. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ಗೆ ಮತ ಹಾಕಿದರೆ ಅವರು ಗ್ಯಾರಂಟಿ ಯೋಜನೆಗಳನ್ನು ವಾಪಸ್ ತೆಗೆದುಕೊಳ್ಳುವಂತಹ ಕಾನೂನು ತರುತ್ತಾರೆ. ಅವರ ಈ ಜನವಿರೋಧಿ ಬುದ್ದಿಯನ್ನು ಮತದಾರರಿಗೆ ತಿಳಿಸುವ ಕೆಲಸ ಮಾಡಬೇಕು. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಾಗಲಿ, ಕಡಿಮೆ ಮಾಡುವುದಾಗಲಿ ಯಾವುದನ್ನೂ ಕಾಂಗ್ರೆಸ್ ಸರ್ಕಾರ ಮಾಡುವುದಿಲ್ಲ. ಈ ವಿಚಾರಗಳನ್ನು ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಯಕರು ಜನರಿಗೆ ಮನವರಿಕೆ ಮಾಡಿಕೊಡಬೇಕು’ ಎಂದರು.</p>.<p>‘ಇಂದಿರಾಗಾಂಧಿ ಅವರ ಬಗ್ಗೆ ಸೋನಿಯಾ ಗಾಂಧಿ ಬರೆದಿರುವ ಪುಸ್ತಕವನ್ನು ಶೀಘ್ರದಲ್ಲೇ ಕನ್ನಡದಲ್ಲಿ ಪ್ರಕಟಿಸಲಾಗುವುದು. ಈ ಪುಸ್ತಕದಲ್ಲಿ ಇಂದಿರಾಗಾಂಧಿ ಅವರು ಕಾಂಗ್ರೆಸ್ ಪಕ್ಷದ ಬಗ್ಗೆ ಹೇಳಿದ ಮಾತುಗಳನ್ನು ಉಲ್ಲೇಖಿಸಲಾಗಿದೆ’ ಎಂದರು.</p>.<p><strong>ಅವಕಾಶ ವಂಚಿತರಿಗೆ ಶಕ್ತಿ:</strong> ‘ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಹೀಗೆ ಎಲ್ಲ ಅವಕಾಶ ವಂಚಿತರಿಗೆ ಶಕ್ತಿ ತುಂಬುವುದೇ ನಿಜವಾದ ಸ್ವಾತಂತ್ರ್ಯದ ಅರ್ಥ. ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಅವಕಾಶ ವಂಚಿತರಿಗಾಗಿ ಶ್ರಮಿಸಿದರು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p>.<p>‘ಅವಕಾಶ ವಂಚಿತರ ಬಗ್ಗೆ ಕಾಳಜಿ, ಉಗ್ರವಾದವನ್ನು ತೀವ್ರವಾಗಿ ಹತ್ತಿಕ್ಕುವ ಕೆಲಸ ಮಾಡಿದರು. ಅದಕ್ಕಾಗಿಯೇ ಪ್ರಾಣ ಕಳೆದುಕೊಂಡರು. ದೇಶಕ್ಕಾಗಿ ಪ್ರಾಣ ತೆತ್ತ ಧೀಮಂತ ಮಹಿಳೆ ಅವರು. ಅವರ ಮಾರ್ಗದರ್ಶನದಲ್ಲಿ ನಡೆಯುವುದೇ ಅವರಿಗೆ ಸಲ್ಲಿಸುವ ಗೌರವ’ ಎಂದರು.</p>.<p>ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್ ಹಾಗೂ ಸಚಿವ ಬೈರತಿ ಸುರೇಶ್, ಕಾಂಗ್ರೆಸ್ ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ಕದ್ದು ಪಂಚರಾಜ್ಯಗಳ ಚುನಾವಣೆಯನ್ನು ಪ್ರಧಾನಿ ಮೋದಿ ಎದುರಿಸುತ್ತಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಲೇವಡಿ ಮಾಡಿದರು.</p>.<p>ಕೆಪಿಸಿಸಿ ಕಚೇರಿಯ ‘ಭಾರತ್ ಜೋಡೊ’ ಸಭಾಂಗಣದಲ್ಲಿ ಭಾನುವಾರ ನಡೆದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಜನ್ಮದಿನಾಚರಣೆ ಮತ್ತು ಬೆಂಗಳೂರು ನೂತನ ಜಿಲ್ಲಾ ಘಟಕಗಳ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿದೆಯೇ ಇಲ್ಲವೇ ಎಂದು ತಿಳಿಯಲು ಸಚಿವರಿಗೆ ಸೂಚನೆ ನೀಡಲಾಗಿದೆ. ಇದೇ 28ರಂದು ಕಾಂಗ್ರೆಸ್ ಸಂಸ್ಥಾಪಕರ ದಿನ. ಈ ದಿನದಂದೇ ಪಕ್ಷದ ವತಿಯಿಂದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿದೆಯೇ ಎಂದು ಸಮೀಕ್ಷೆ ಮಾಡಲು ಸಮಿತಿ ರಚಿಸಲಾಗುವುದು’ ಎಂದರು.</p>.<p>‘ಬಿಜೆಪಿ ಮತ್ತು ಜೆಡಿಎಸ್ನವರು ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದವರು. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ಗೆ ಮತ ಹಾಕಿದರೆ ಅವರು ಗ್ಯಾರಂಟಿ ಯೋಜನೆಗಳನ್ನು ವಾಪಸ್ ತೆಗೆದುಕೊಳ್ಳುವಂತಹ ಕಾನೂನು ತರುತ್ತಾರೆ. ಅವರ ಈ ಜನವಿರೋಧಿ ಬುದ್ದಿಯನ್ನು ಮತದಾರರಿಗೆ ತಿಳಿಸುವ ಕೆಲಸ ಮಾಡಬೇಕು. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಾಗಲಿ, ಕಡಿಮೆ ಮಾಡುವುದಾಗಲಿ ಯಾವುದನ್ನೂ ಕಾಂಗ್ರೆಸ್ ಸರ್ಕಾರ ಮಾಡುವುದಿಲ್ಲ. ಈ ವಿಚಾರಗಳನ್ನು ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಯಕರು ಜನರಿಗೆ ಮನವರಿಕೆ ಮಾಡಿಕೊಡಬೇಕು’ ಎಂದರು.</p>.<p>‘ಇಂದಿರಾಗಾಂಧಿ ಅವರ ಬಗ್ಗೆ ಸೋನಿಯಾ ಗಾಂಧಿ ಬರೆದಿರುವ ಪುಸ್ತಕವನ್ನು ಶೀಘ್ರದಲ್ಲೇ ಕನ್ನಡದಲ್ಲಿ ಪ್ರಕಟಿಸಲಾಗುವುದು. ಈ ಪುಸ್ತಕದಲ್ಲಿ ಇಂದಿರಾಗಾಂಧಿ ಅವರು ಕಾಂಗ್ರೆಸ್ ಪಕ್ಷದ ಬಗ್ಗೆ ಹೇಳಿದ ಮಾತುಗಳನ್ನು ಉಲ್ಲೇಖಿಸಲಾಗಿದೆ’ ಎಂದರು.</p>.<p><strong>ಅವಕಾಶ ವಂಚಿತರಿಗೆ ಶಕ್ತಿ:</strong> ‘ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಹೀಗೆ ಎಲ್ಲ ಅವಕಾಶ ವಂಚಿತರಿಗೆ ಶಕ್ತಿ ತುಂಬುವುದೇ ನಿಜವಾದ ಸ್ವಾತಂತ್ರ್ಯದ ಅರ್ಥ. ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಅವಕಾಶ ವಂಚಿತರಿಗಾಗಿ ಶ್ರಮಿಸಿದರು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p>.<p>‘ಅವಕಾಶ ವಂಚಿತರ ಬಗ್ಗೆ ಕಾಳಜಿ, ಉಗ್ರವಾದವನ್ನು ತೀವ್ರವಾಗಿ ಹತ್ತಿಕ್ಕುವ ಕೆಲಸ ಮಾಡಿದರು. ಅದಕ್ಕಾಗಿಯೇ ಪ್ರಾಣ ಕಳೆದುಕೊಂಡರು. ದೇಶಕ್ಕಾಗಿ ಪ್ರಾಣ ತೆತ್ತ ಧೀಮಂತ ಮಹಿಳೆ ಅವರು. ಅವರ ಮಾರ್ಗದರ್ಶನದಲ್ಲಿ ನಡೆಯುವುದೇ ಅವರಿಗೆ ಸಲ್ಲಿಸುವ ಗೌರವ’ ಎಂದರು.</p>.<p>ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್ ಹಾಗೂ ಸಚಿವ ಬೈರತಿ ಸುರೇಶ್, ಕಾಂಗ್ರೆಸ್ ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>