<p><strong>ಬೆಂಗಳೂರು</strong>: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಹಾಗೂ ನಿಗಮದಲ್ಲಿ ನಡೆದಿರುವ ಹಣಕಾಸಿನ ಅವ್ಯವಹಾರಗಳ ಬಗ್ಗೆ ತನಿಖೆಗೆ ಐಪಿಎಸ್ ಅಧಿಕಾರಿ ಮನೀಷ್ ಖರ್ಬೀಕರ್ ನೇತೃತ್ವದಲ್ಲಿ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ(ಎಸ್ಐಟಿ) ರಚಿಸಿದೆ.</p><p>ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಬೆಂಗಳೂರು ಕಚೇರಿಯಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಚಂದ್ರಶೇಖರ್ ಪಿ. (52) ಅವರು ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್ ಬಳಿಯಿರುವ ತಮ್ಮ ನಿವಾಸದಲ್ಲಿ ಮೇ 26ರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದರು.</p><p>ತಮ್ಮ ಸಾವಿಗೆ ಕಾರಣರಾಗಿದ್ದಾರೆ ಎನ್ನಲಾದವರ ಹೆಸರು ಮತ್ತು ನಿಗಮದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಬಗ್ಗೆ ಡೆತ್ನೋಟ್ನಲ್ಲಿ ಚಂದ್ರಶೇಖರ್ ಅವರು ವಿವರವಾಗಿ ಉಲ್ಲೇಖಿಸಿದ್ದರು.</p><p>ಶಿವಮೊಗ್ಗ ಜಿಲ್ಲೆಯವರಾದ ಇವರು, ಬೆಂಗಳೂರಿನಿಂದ ಮೇ 25ರಂದು ನಗರಕ್ಕೆ ಬಂದಿದ್ದರು. 26ರಂದು ಪತ್ನಿ ಕವಿತಾ ಮತ್ತಿತರರು ಮೃತರೊಬ್ಬರ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಮಾಚೇನಹಳ್ಳಿಗೆ ತೆರಳಿದ್ದರಿಂದ ಮನೆಯಲ್ಲಿ ಯಾರೂ ಇರಲಿಲ್ಲ. ಈ ಸಮಯದಲ್ಲಿ ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಮರಣ ಪತ್ರ ಪತ್ತೆ: ‘ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ. ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ ದುರುಗಣ್ಣವರ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಮುಖ್ಯ ವ್ಯವಸ್ಥಾಪಕಿ ಶುಚಿಸ್ಮತಾ ರವುಲ್ ನನ್ನ ಸಾವಿಗೆ ಕಾರಣ. ಮಾನ್ಯ ಸಚಿವರು ಮೌಖಿಕವಾಗಿ ಸೂಚಿಸಿದ್ದಾರೆ ಎಂದು ಹಣ ವರ್ಗಾಯಿಸಲು ಲೆಕ್ಕಾಧಿಕಾರಿ ಹೇಳಿದ ಹಿನ್ನೆಲೆಯಲ್ಲಿ ನಿಗಮದ ₹187.33 ಕೋಟಿ ಅನುದಾನವನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಲಾಗಿದೆ. ವ್ಯವಸ್ಥಾಪಕ ನಿರ್ದೇಶಕರು ಒತ್ತಾಯಪೂರ್ವಕ ಅನುದಾನ ವರ್ಗಾಯಿಸುತ್ತಿದ್ದರು. ನಮಗೆ ಅವರ ಒಳಸಂಚು ಅರ್ಥವೇ ಆಗಿಲ್ಲ. ಬ್ಯಾಂಕ್ನವರು ಚೆಕ್ ಬುಕ್ ಮತ್ತು ಪಾಸ್ ಬುಕ್ ಅನ್ನು ಈವರೆಗೂ ನೀಡಿಲ್ಲ. ಇದಲ್ಲದೇ ನಿಗಮದಲ್ಲಿ ಅಂದಾಜು ₹80 ಕೋಟಿಯಿಂದ</p><p>₹85 ಕೋಟಿ ಅವ್ಯವಹಾರ ಆಗಿದೆ. ಅಧಿಕಾರಿಗಳು ಅಕ್ರಮವಾಗಿ ಹಣ ವರ್ಗಾವಣೆ ಮಾಡಿಸಿದ್ದಾರೆ’ ಎಂದು ಡೆತ್ನೋಟ್ನಲ್ಲಿ ಉಲ್ಲೇಖಿಸಿದ್ದರು.</p><p>‘ನಾನು ನಿಗಮಕ್ಕೆ ಮೋಸ ಮಾಡಿಲ್ಲ. ಅವ್ಯವಹಾರದಲ್ಲಿ ಭಾಗಿ ಆಗಿಲ್ಲ.</p><p>ವಂಚನೆಯನ್ನೂ ಮಾಡಿಲ್ಲ. ಬೇರೆಯವರು ನಿಯಮಬಾಹಿರವಾಗಿ ಹಣ ಲೂಟಿ ಮಾಡಿರುವುದು ಕಂಡುಬರುತ್ತಿದೆ. ಇದರಲ್ಲಿ ನನ್ನ ಪಾತ್ರವಿಲ್ಲ. ಕೆಲಸದ ಒತ್ತಡದಲ್ಲಿ ನಾನು ಮಾಡಿರುವ ತಪ್ಪು ಏನೆಂದರೆ, ಖಾತೆಯ ಚೆಕ್ ಬುಕ್ ಮತ್ತು ಕ್ಯಾಶ್ ಪುಸ್ತಕ ಮುಕ್ತಾಯಗೊಳಿಸದಿರುವುದು’ ಎಂದು ಬರೆದಿದ್ದಾರೆ.</p><p>‘ನಾನು ಹೇಡಿಯಲ್ಲ. ಅಲ್ಲದೇ, ಅವಮಾನವನ್ನು ಸಹಿಸಲಾರೆ. ನನಗೆ ಬೇರೆ ದಾರಿ ತೋಚಲಿಲ್ಲ. ಎಲ್ಲರೂ ಕ್ಷಮಿಸಿ’ ಎಂದು ಚಂದ್ರಶೇಖರ್ ಬರೆದಿದ್ದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಹಾಗೂ ನಿಗಮದಲ್ಲಿ ನಡೆದಿರುವ ಹಣಕಾಸಿನ ಅವ್ಯವಹಾರಗಳ ಬಗ್ಗೆ ತನಿಖೆಗೆ ಐಪಿಎಸ್ ಅಧಿಕಾರಿ ಮನೀಷ್ ಖರ್ಬೀಕರ್ ನೇತೃತ್ವದಲ್ಲಿ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ(ಎಸ್ಐಟಿ) ರಚಿಸಿದೆ.</p><p>ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಬೆಂಗಳೂರು ಕಚೇರಿಯಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಚಂದ್ರಶೇಖರ್ ಪಿ. (52) ಅವರು ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್ ಬಳಿಯಿರುವ ತಮ್ಮ ನಿವಾಸದಲ್ಲಿ ಮೇ 26ರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದರು.</p><p>ತಮ್ಮ ಸಾವಿಗೆ ಕಾರಣರಾಗಿದ್ದಾರೆ ಎನ್ನಲಾದವರ ಹೆಸರು ಮತ್ತು ನಿಗಮದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಬಗ್ಗೆ ಡೆತ್ನೋಟ್ನಲ್ಲಿ ಚಂದ್ರಶೇಖರ್ ಅವರು ವಿವರವಾಗಿ ಉಲ್ಲೇಖಿಸಿದ್ದರು.</p><p>ಶಿವಮೊಗ್ಗ ಜಿಲ್ಲೆಯವರಾದ ಇವರು, ಬೆಂಗಳೂರಿನಿಂದ ಮೇ 25ರಂದು ನಗರಕ್ಕೆ ಬಂದಿದ್ದರು. 26ರಂದು ಪತ್ನಿ ಕವಿತಾ ಮತ್ತಿತರರು ಮೃತರೊಬ್ಬರ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಮಾಚೇನಹಳ್ಳಿಗೆ ತೆರಳಿದ್ದರಿಂದ ಮನೆಯಲ್ಲಿ ಯಾರೂ ಇರಲಿಲ್ಲ. ಈ ಸಮಯದಲ್ಲಿ ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಮರಣ ಪತ್ರ ಪತ್ತೆ: ‘ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ. ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ ದುರುಗಣ್ಣವರ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಮುಖ್ಯ ವ್ಯವಸ್ಥಾಪಕಿ ಶುಚಿಸ್ಮತಾ ರವುಲ್ ನನ್ನ ಸಾವಿಗೆ ಕಾರಣ. ಮಾನ್ಯ ಸಚಿವರು ಮೌಖಿಕವಾಗಿ ಸೂಚಿಸಿದ್ದಾರೆ ಎಂದು ಹಣ ವರ್ಗಾಯಿಸಲು ಲೆಕ್ಕಾಧಿಕಾರಿ ಹೇಳಿದ ಹಿನ್ನೆಲೆಯಲ್ಲಿ ನಿಗಮದ ₹187.33 ಕೋಟಿ ಅನುದಾನವನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಲಾಗಿದೆ. ವ್ಯವಸ್ಥಾಪಕ ನಿರ್ದೇಶಕರು ಒತ್ತಾಯಪೂರ್ವಕ ಅನುದಾನ ವರ್ಗಾಯಿಸುತ್ತಿದ್ದರು. ನಮಗೆ ಅವರ ಒಳಸಂಚು ಅರ್ಥವೇ ಆಗಿಲ್ಲ. ಬ್ಯಾಂಕ್ನವರು ಚೆಕ್ ಬುಕ್ ಮತ್ತು ಪಾಸ್ ಬುಕ್ ಅನ್ನು ಈವರೆಗೂ ನೀಡಿಲ್ಲ. ಇದಲ್ಲದೇ ನಿಗಮದಲ್ಲಿ ಅಂದಾಜು ₹80 ಕೋಟಿಯಿಂದ</p><p>₹85 ಕೋಟಿ ಅವ್ಯವಹಾರ ಆಗಿದೆ. ಅಧಿಕಾರಿಗಳು ಅಕ್ರಮವಾಗಿ ಹಣ ವರ್ಗಾವಣೆ ಮಾಡಿಸಿದ್ದಾರೆ’ ಎಂದು ಡೆತ್ನೋಟ್ನಲ್ಲಿ ಉಲ್ಲೇಖಿಸಿದ್ದರು.</p><p>‘ನಾನು ನಿಗಮಕ್ಕೆ ಮೋಸ ಮಾಡಿಲ್ಲ. ಅವ್ಯವಹಾರದಲ್ಲಿ ಭಾಗಿ ಆಗಿಲ್ಲ.</p><p>ವಂಚನೆಯನ್ನೂ ಮಾಡಿಲ್ಲ. ಬೇರೆಯವರು ನಿಯಮಬಾಹಿರವಾಗಿ ಹಣ ಲೂಟಿ ಮಾಡಿರುವುದು ಕಂಡುಬರುತ್ತಿದೆ. ಇದರಲ್ಲಿ ನನ್ನ ಪಾತ್ರವಿಲ್ಲ. ಕೆಲಸದ ಒತ್ತಡದಲ್ಲಿ ನಾನು ಮಾಡಿರುವ ತಪ್ಪು ಏನೆಂದರೆ, ಖಾತೆಯ ಚೆಕ್ ಬುಕ್ ಮತ್ತು ಕ್ಯಾಶ್ ಪುಸ್ತಕ ಮುಕ್ತಾಯಗೊಳಿಸದಿರುವುದು’ ಎಂದು ಬರೆದಿದ್ದಾರೆ.</p><p>‘ನಾನು ಹೇಡಿಯಲ್ಲ. ಅಲ್ಲದೇ, ಅವಮಾನವನ್ನು ಸಹಿಸಲಾರೆ. ನನಗೆ ಬೇರೆ ದಾರಿ ತೋಚಲಿಲ್ಲ. ಎಲ್ಲರೂ ಕ್ಷಮಿಸಿ’ ಎಂದು ಚಂದ್ರಶೇಖರ್ ಬರೆದಿದ್ದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>