<p><strong>ಬೆಂಗಳೂರು</strong>: ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೇಶ್ಗೌಡ ಗೌಡರ್ ಕೊಲೆ ಪ್ರಕರಣದ ಆರೋಪಿಯಾಗಿದ್ದ, ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಸೇರಿದಂತೆ 17 ಜನ ಆರೋಪಿಗಳನ್ನು ‘ಅಪರಾಧಿಗಳು’ ಎಂದು ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯ ತೀರ್ಮಾನಿಸಿದೆ.</p><p>ಪ್ರಕರಣದ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಬುಧವಾರ ಸಂಜೆ ತೆರೆದ ನ್ಯಾಯಾಲಯದಲ್ಲಿ ಪ್ರಕಟಿಸಿದರು.</p><p>ಶಿಕ್ಷೆಯ ಪ್ರಮಾಣವನ್ನು ಗುರುವಾರ ಪ್ರಕಟಿಸುವುದಾಗಿ ತಿಳಿಸಿದ ನ್ಯಾಯಾಧೀಶರು ಎಲ್ಲ ಅಪರಾಧಿಗಳನ್ನು ಕೂಡಲೇ ಕಸ್ಟಡಿಗೆ ಪಡೆಯುವಂತೆ ಸಿಬಿಐ ಪೊಲೀಸರಿಗೆ ನಿರ್ದೇಶಿಸಿದರು. ಕೊಲೆ ಪ್ರಕರಣದಲ್ಲಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಅಥವಾ ಮರಣ ದಂಡನೆ ವಿಧಿಸಲು ಅವಕಾಶವಿದೆ. ವಿಸ್ತೃತ ತೀರ್ಪು ಇನ್ನಷ್ಟೇ ಬಿಡುಗಡೆಯಾಗಬೇಕಿದೆ.</p><p>21 ಆರೋಪಿಗಳು: ಪ್ರಕರಣದಲ್ಲಿ ಒಟ್ಟು 21 ಜನರನ್ನು ಆರೋಪಿಗಳು ಎಂದು ಹೆಸರಿಸಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. </p><p>ಅಪರಾಧಿಗಳು: ಕೊಲೆ ಮತ್ತು ಕ್ರಿಮಿನಲ್ ಪಿತೂರಿಯೂ ಸೇರಿದಂತೆ ಭಾರತೀಯ ದಂಡ ಸಂಹಿತೆ–1860ರ (ಐಪಿಸಿ) ವಿವಿಧ ಕಲಂಗಳ ಅಡಿಯಲ್ಲಿ 17 ಜನ ಆರೋಪಿಗಳನ್ನು ಅಪರಾಧಿಗಳು ಎಂದು ತೀರ್ಮಾನಿಸಲಾಗಿದೆ. ಅವರಲ್ಲಿ ವಿನಯ ಕುಲಕರ್ಣಿ, ವಿಕ್ರಂ ಬಳ್ಳಾರಿ, ಬಸವರಾಜ ಕುರಹಟ್ಟಿ, ಸಂದೀಪ್ ಸೌದತ್ತಿ, ವಿನಾಯಕ ಕಟಗಿ, ಮಹೇಶ್ವರ ಹೊಂಗಲ್ ಅಲಿಯಾಸ್ ಮುದುಕ, ಸಂತೋಷ ಸವದತ್ತಿ, ಎಂ.ದಿನೇಶ್, ಅಶ್ವತ್ಥ, ಸುನಿಲ್, ನಜೀರ್ ಅಹಮದ್, ಶಹನವಾಜ್, ನೂತನ್, ಹರ್ಷಿತ, ಚಂದ್ರಶೇಖರ ಇಂಡಿ, ವಿಕಾಸ್ ಕಲಬುರಗಿ ಮತ್ತು ಚನ್ನಕೇಶವ ಬಿ ಟಿಂಗರಿಕರ ಇವರನ್ನು ಅಪರಾಧಿಗಳು ಎಂದು ನ್ಯಾಯಾಲಯ ಘೋಷಿಸಿದೆ.</p><p>ಖುಲಾಸೆಗೊಂಡವರು: ಸಂಶಯದ ಲಾಭದ ಅಡಿಯಲ್ಲಿ ವಾಸುದೇವ ರಾಮ ನಿಲೇಕಣಿ ಹಾಗೂ ಸೋಮಶೇಖರ ಬಸಪ್ಪ ನ್ಯಾಮಗೌಡ ಅವರನ್ನು ಖುಲಾಸೆಗೊಳಿಸಲಾಗಿದೆ. </p><p>ಮಾಫಿ ಸಾಕ್ಷಿಯಾದವರು: ಬಸವರಾಜ ಮುತ್ತಗಿ ಮತ್ತು ಶಿವಾನಂದ ಶ್ರೀಶೈಲ ಬಿರಾದಾರ ಇವರನ್ನು ಕೈಬಿಡಲಾಗಿದೆ.</p><p>ಸುಳ್ಳು ಹೇಳಿಕೆಗೆ ಕೇಸು: ಸುಳ್ಳು ಹೇಳಿಕೆ ನೀಡಿದ ಆರೋಪದಡಿ ಪೊಲೀಸ್ ಅಧಿಕಾರಿಗಳೂ ಆದ ಮೂವರು ಪ್ರಾಸಿಕ್ಯೂಷನ್ ಸಾಕ್ಷಿಗಳಾದ ಶಿವಾನಂದ ಚಲವಾದಿ, ಬಾಬು ಕಟಗಿ ಮತ್ತು ಶಂಕರಗೌಡ ಬಸನಗೌಡ ಪಾಟೀಲ ಹಾಗೂ ಸ್ವತಂತ್ರ ಸಾಕ್ಷಿಗಳಾದ ದತ್ತಾತ್ರೇಯ ಗುಂಡಗತ್ತಿ, ಆನಂದ ಈರಪ್ಪ ಉದ್ದಣ್ಣವರ, ವಿನಾಯಕ ಬಿಂಜಿಯವರ, ಮೋಹನ ಈಚರಪ್ಪ ಮುಲುಮುತ್ತಲ ವಿವೇಕಾನಂದ ದಳವಾಯಿ ಮತ್ತು ನಟರಾಜ ಸರ್ಜ ದೇಸಾಯಿ ಮತ್ತು ವಿಜಯ ಕುಲಕರ್ಣಿ ವಿರುದ್ಧ; ಅಪರಾಧ ಪ್ರಕ್ರಿಯಾ ಸಂಹಿತೆ–1973ರ (ಸಿಆರ್ಪಿಸಿ) ಕಲಂ 340ರ ಅಡಿಯಲ್ಲಿ ‘ಪರ್ಜುರಿ’ (ಸುಳ್ಳು ಹೇಳಿಕೆ ನೀಡಿದ ಸಾಕ್ಷಿ) ಕೇಸನ್ನು ದಾಖಲಿಸುವಂತೆ ಸಿಟಿ ಸಿವಿಲ್ ಕೋರ್ಟ್ ರಿಜಿಸ್ಟ್ರಾರ್ ಅವರಿಗೆ ನ್ಯಾಯಾಧೀಶರು ಆದೇಶಿಸಿದ್ದಾರೆ.</p><p>ಪ್ರಕರಣವೇನು?: ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2016ರ ಜೂನ್ 15ರಂದು ಯೋಗೇಶ್ಗೌಡ ಗೌಡರ್ ಕೊಲೆ ನಡೆದಿತ್ತು. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು. </p><p>ಪ್ರಾಸಿಕ್ಯೂಷನ್ ಪರವಾಗಿ ಕೆ.ಎಸ್.ಹೇಮಾ ಕಾರಂತ ಹಾಗೂ ಶಿವಾನಂದ ಪೆರ್ಲ, ಪ್ರಮುಖ ಆರೋಪಿ ವಿನಯ ಕುಲಕರ್ಣಿ ಪರ ಪದಾಂಕಿತ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದ್ದರು.</p> .ಯೋಗೇಶ್ಗೌಡ ಕೊಲೆ ಪ್ರಕರಣದ ತೀರ್ಪು ಪ್ರಕಟಣೆ ಏಪ್ರಿಲ್ 15ಕ್ಕೆ ಮುಂದೂಡಿಕೆ. ಯೋಗೀಶ್ಗೌಡ ಕೊಲೆ ಪ್ರಕರಣ | ವಿನಯ ಕುಲಕರ್ಣಿ ಜಾಮೀನು ಅರ್ಜಿ: ಸಿಬಿಐಗೆ ನೋಟಿಸ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೇಶ್ಗೌಡ ಗೌಡರ್ ಕೊಲೆ ಪ್ರಕರಣದ ಆರೋಪಿಯಾಗಿದ್ದ, ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಸೇರಿದಂತೆ 17 ಜನ ಆರೋಪಿಗಳನ್ನು ‘ಅಪರಾಧಿಗಳು’ ಎಂದು ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯ ತೀರ್ಮಾನಿಸಿದೆ.</p><p>ಪ್ರಕರಣದ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಬುಧವಾರ ಸಂಜೆ ತೆರೆದ ನ್ಯಾಯಾಲಯದಲ್ಲಿ ಪ್ರಕಟಿಸಿದರು.</p><p>ಶಿಕ್ಷೆಯ ಪ್ರಮಾಣವನ್ನು ಗುರುವಾರ ಪ್ರಕಟಿಸುವುದಾಗಿ ತಿಳಿಸಿದ ನ್ಯಾಯಾಧೀಶರು ಎಲ್ಲ ಅಪರಾಧಿಗಳನ್ನು ಕೂಡಲೇ ಕಸ್ಟಡಿಗೆ ಪಡೆಯುವಂತೆ ಸಿಬಿಐ ಪೊಲೀಸರಿಗೆ ನಿರ್ದೇಶಿಸಿದರು. ಕೊಲೆ ಪ್ರಕರಣದಲ್ಲಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಅಥವಾ ಮರಣ ದಂಡನೆ ವಿಧಿಸಲು ಅವಕಾಶವಿದೆ. ವಿಸ್ತೃತ ತೀರ್ಪು ಇನ್ನಷ್ಟೇ ಬಿಡುಗಡೆಯಾಗಬೇಕಿದೆ.</p><p>21 ಆರೋಪಿಗಳು: ಪ್ರಕರಣದಲ್ಲಿ ಒಟ್ಟು 21 ಜನರನ್ನು ಆರೋಪಿಗಳು ಎಂದು ಹೆಸರಿಸಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. </p><p>ಅಪರಾಧಿಗಳು: ಕೊಲೆ ಮತ್ತು ಕ್ರಿಮಿನಲ್ ಪಿತೂರಿಯೂ ಸೇರಿದಂತೆ ಭಾರತೀಯ ದಂಡ ಸಂಹಿತೆ–1860ರ (ಐಪಿಸಿ) ವಿವಿಧ ಕಲಂಗಳ ಅಡಿಯಲ್ಲಿ 17 ಜನ ಆರೋಪಿಗಳನ್ನು ಅಪರಾಧಿಗಳು ಎಂದು ತೀರ್ಮಾನಿಸಲಾಗಿದೆ. ಅವರಲ್ಲಿ ವಿನಯ ಕುಲಕರ್ಣಿ, ವಿಕ್ರಂ ಬಳ್ಳಾರಿ, ಬಸವರಾಜ ಕುರಹಟ್ಟಿ, ಸಂದೀಪ್ ಸೌದತ್ತಿ, ವಿನಾಯಕ ಕಟಗಿ, ಮಹೇಶ್ವರ ಹೊಂಗಲ್ ಅಲಿಯಾಸ್ ಮುದುಕ, ಸಂತೋಷ ಸವದತ್ತಿ, ಎಂ.ದಿನೇಶ್, ಅಶ್ವತ್ಥ, ಸುನಿಲ್, ನಜೀರ್ ಅಹಮದ್, ಶಹನವಾಜ್, ನೂತನ್, ಹರ್ಷಿತ, ಚಂದ್ರಶೇಖರ ಇಂಡಿ, ವಿಕಾಸ್ ಕಲಬುರಗಿ ಮತ್ತು ಚನ್ನಕೇಶವ ಬಿ ಟಿಂಗರಿಕರ ಇವರನ್ನು ಅಪರಾಧಿಗಳು ಎಂದು ನ್ಯಾಯಾಲಯ ಘೋಷಿಸಿದೆ.</p><p>ಖುಲಾಸೆಗೊಂಡವರು: ಸಂಶಯದ ಲಾಭದ ಅಡಿಯಲ್ಲಿ ವಾಸುದೇವ ರಾಮ ನಿಲೇಕಣಿ ಹಾಗೂ ಸೋಮಶೇಖರ ಬಸಪ್ಪ ನ್ಯಾಮಗೌಡ ಅವರನ್ನು ಖುಲಾಸೆಗೊಳಿಸಲಾಗಿದೆ. </p><p>ಮಾಫಿ ಸಾಕ್ಷಿಯಾದವರು: ಬಸವರಾಜ ಮುತ್ತಗಿ ಮತ್ತು ಶಿವಾನಂದ ಶ್ರೀಶೈಲ ಬಿರಾದಾರ ಇವರನ್ನು ಕೈಬಿಡಲಾಗಿದೆ.</p><p>ಸುಳ್ಳು ಹೇಳಿಕೆಗೆ ಕೇಸು: ಸುಳ್ಳು ಹೇಳಿಕೆ ನೀಡಿದ ಆರೋಪದಡಿ ಪೊಲೀಸ್ ಅಧಿಕಾರಿಗಳೂ ಆದ ಮೂವರು ಪ್ರಾಸಿಕ್ಯೂಷನ್ ಸಾಕ್ಷಿಗಳಾದ ಶಿವಾನಂದ ಚಲವಾದಿ, ಬಾಬು ಕಟಗಿ ಮತ್ತು ಶಂಕರಗೌಡ ಬಸನಗೌಡ ಪಾಟೀಲ ಹಾಗೂ ಸ್ವತಂತ್ರ ಸಾಕ್ಷಿಗಳಾದ ದತ್ತಾತ್ರೇಯ ಗುಂಡಗತ್ತಿ, ಆನಂದ ಈರಪ್ಪ ಉದ್ದಣ್ಣವರ, ವಿನಾಯಕ ಬಿಂಜಿಯವರ, ಮೋಹನ ಈಚರಪ್ಪ ಮುಲುಮುತ್ತಲ ವಿವೇಕಾನಂದ ದಳವಾಯಿ ಮತ್ತು ನಟರಾಜ ಸರ್ಜ ದೇಸಾಯಿ ಮತ್ತು ವಿಜಯ ಕುಲಕರ್ಣಿ ವಿರುದ್ಧ; ಅಪರಾಧ ಪ್ರಕ್ರಿಯಾ ಸಂಹಿತೆ–1973ರ (ಸಿಆರ್ಪಿಸಿ) ಕಲಂ 340ರ ಅಡಿಯಲ್ಲಿ ‘ಪರ್ಜುರಿ’ (ಸುಳ್ಳು ಹೇಳಿಕೆ ನೀಡಿದ ಸಾಕ್ಷಿ) ಕೇಸನ್ನು ದಾಖಲಿಸುವಂತೆ ಸಿಟಿ ಸಿವಿಲ್ ಕೋರ್ಟ್ ರಿಜಿಸ್ಟ್ರಾರ್ ಅವರಿಗೆ ನ್ಯಾಯಾಧೀಶರು ಆದೇಶಿಸಿದ್ದಾರೆ.</p><p>ಪ್ರಕರಣವೇನು?: ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2016ರ ಜೂನ್ 15ರಂದು ಯೋಗೇಶ್ಗೌಡ ಗೌಡರ್ ಕೊಲೆ ನಡೆದಿತ್ತು. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು. </p><p>ಪ್ರಾಸಿಕ್ಯೂಷನ್ ಪರವಾಗಿ ಕೆ.ಎಸ್.ಹೇಮಾ ಕಾರಂತ ಹಾಗೂ ಶಿವಾನಂದ ಪೆರ್ಲ, ಪ್ರಮುಖ ಆರೋಪಿ ವಿನಯ ಕುಲಕರ್ಣಿ ಪರ ಪದಾಂಕಿತ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದ್ದರು.</p> .ಯೋಗೇಶ್ಗೌಡ ಕೊಲೆ ಪ್ರಕರಣದ ತೀರ್ಪು ಪ್ರಕಟಣೆ ಏಪ್ರಿಲ್ 15ಕ್ಕೆ ಮುಂದೂಡಿಕೆ. ಯೋಗೀಶ್ಗೌಡ ಕೊಲೆ ಪ್ರಕರಣ | ವಿನಯ ಕುಲಕರ್ಣಿ ಜಾಮೀನು ಅರ್ಜಿ: ಸಿಬಿಐಗೆ ನೋಟಿಸ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>