<p><strong>ಲಾಹೋರ್</strong>: ಬಂಗಾಳ ಹುಲಿಯೊಂದು ಪಂಜರದಿಂದ ತಪ್ಪಿಸಿಕೊಂಡು ಇಬ್ಬರು ವ್ಯಕ್ತಿಗಳನ್ನು ಗಾಯಗೊಳಿಸಿರುವ ಘಟನೆ ಪಾಕಿಸ್ತಾನ ಪಂಜಾಬ್ ಪ್ರಾಂತ್ಯದ ಮುಲ್ತಾನ್ ಎಂಬಲ್ಲಿ ಭಾನುವಾರ ನಡೆದಿದೆ.</p><p>ಹುಲಿಯನ್ನು ಅದರ ಮಾಲೀಕ ವಾಕಸ್ ಅಹ್ಮದ್ ಎನ್ನುವವರು ಲಾಹೋರ್ನಿಂದ ಮುಲ್ತಾನ್ನ ಮೃಗಾಲಯಕ್ಕೆ ಸಾಗಿಸುತ್ತಿದ್ದರು. ಮುಲ್ತಾನ್ ಹೊರವಲಯದಲ್ಲಿ ವಾಹನದೊಳಗಿನ ಪಂಜರದಲ್ಲಿದ್ದ ಹುಲಿ ಸರಳುಗಳನ್ನು ಮುರಿದು ಹೊರಗೆ ಬಂದಿತ್ತು.</p><p>ಈ ವೇಳೆ ಹುಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರ ಮೇಲೆ ದಾಳಿ ಮಾಡಿ ಗಾಯಗೊಳಿಸಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪಂಜಾಬ್ ಪ್ರಾಂತ್ಯದ ವನ್ಯಜೀವಿ ಇಲಾಖೆಯ ನಿರ್ದೇಶಕ ಮುದಾಸರ್ ರಿಯಾಜ್ ಮಲೀಕ್ ಅವರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.</p><p>ಹುಲಿ ಪಂಜರದಿಂದ ತಪ್ಪಿಸಿಕೊಂಡ ಸುದ್ದಿ ತಿಳಿದು ನಮ್ಮ ತಂಡ ಭಾರಿ ಕಾರ್ಯಾಚರಣೆ ನಡೆಸಿ ಹುಲಿಯನ್ನು ಸೆರೆ ಹಿಡಿದಿದೆ. ಅದನ್ನು ಮುಲ್ತಾನ್ನ ಮೃಗಾಲಯಕ್ಕೆ ಬಿಡಲಾಗುವುದು ಎಂದು ತಿಳಿಸಿದ್ದಾರೆ.</p><p>ನಮ್ಮ ಇಲಾಖೆಗೆ ಮೊದಲೇ ಮಾಹಿತಿ ನೀಡದೇ ಹುಲಿಯನ್ನು ಸಾಗಿಸುತ್ತಿದ್ದ ಅದರ ಮಾಲೀಕನಿಗೆ ದಂಡ ವಿಧಿಸಲಾಗಿದೆ ಎಂದು ರಿಯಾಜ್ ಮಲೀಕ್ ತಿಳಿಸಿದ್ದಾರೆ.</p>.ಗುಂಡ್ಲುಪೇಟೆ: ಬಿಸಿಲಿನ ಝಳಕ್ಕೆ ನೀರಿಗಿಳಿದ ಹುಲಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಾಹೋರ್</strong>: ಬಂಗಾಳ ಹುಲಿಯೊಂದು ಪಂಜರದಿಂದ ತಪ್ಪಿಸಿಕೊಂಡು ಇಬ್ಬರು ವ್ಯಕ್ತಿಗಳನ್ನು ಗಾಯಗೊಳಿಸಿರುವ ಘಟನೆ ಪಾಕಿಸ್ತಾನ ಪಂಜಾಬ್ ಪ್ರಾಂತ್ಯದ ಮುಲ್ತಾನ್ ಎಂಬಲ್ಲಿ ಭಾನುವಾರ ನಡೆದಿದೆ.</p><p>ಹುಲಿಯನ್ನು ಅದರ ಮಾಲೀಕ ವಾಕಸ್ ಅಹ್ಮದ್ ಎನ್ನುವವರು ಲಾಹೋರ್ನಿಂದ ಮುಲ್ತಾನ್ನ ಮೃಗಾಲಯಕ್ಕೆ ಸಾಗಿಸುತ್ತಿದ್ದರು. ಮುಲ್ತಾನ್ ಹೊರವಲಯದಲ್ಲಿ ವಾಹನದೊಳಗಿನ ಪಂಜರದಲ್ಲಿದ್ದ ಹುಲಿ ಸರಳುಗಳನ್ನು ಮುರಿದು ಹೊರಗೆ ಬಂದಿತ್ತು.</p><p>ಈ ವೇಳೆ ಹುಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರ ಮೇಲೆ ದಾಳಿ ಮಾಡಿ ಗಾಯಗೊಳಿಸಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪಂಜಾಬ್ ಪ್ರಾಂತ್ಯದ ವನ್ಯಜೀವಿ ಇಲಾಖೆಯ ನಿರ್ದೇಶಕ ಮುದಾಸರ್ ರಿಯಾಜ್ ಮಲೀಕ್ ಅವರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.</p><p>ಹುಲಿ ಪಂಜರದಿಂದ ತಪ್ಪಿಸಿಕೊಂಡ ಸುದ್ದಿ ತಿಳಿದು ನಮ್ಮ ತಂಡ ಭಾರಿ ಕಾರ್ಯಾಚರಣೆ ನಡೆಸಿ ಹುಲಿಯನ್ನು ಸೆರೆ ಹಿಡಿದಿದೆ. ಅದನ್ನು ಮುಲ್ತಾನ್ನ ಮೃಗಾಲಯಕ್ಕೆ ಬಿಡಲಾಗುವುದು ಎಂದು ತಿಳಿಸಿದ್ದಾರೆ.</p><p>ನಮ್ಮ ಇಲಾಖೆಗೆ ಮೊದಲೇ ಮಾಹಿತಿ ನೀಡದೇ ಹುಲಿಯನ್ನು ಸಾಗಿಸುತ್ತಿದ್ದ ಅದರ ಮಾಲೀಕನಿಗೆ ದಂಡ ವಿಧಿಸಲಾಗಿದೆ ಎಂದು ರಿಯಾಜ್ ಮಲೀಕ್ ತಿಳಿಸಿದ್ದಾರೆ.</p>.ಗುಂಡ್ಲುಪೇಟೆ: ಬಿಸಿಲಿನ ಝಳಕ್ಕೆ ನೀರಿಗಿಳಿದ ಹುಲಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>