ಇದಕ್ಕೂ ಮುನ್ನ ಹರಿಯಾಣದ ಸೋನಿಪತ್ನಲ್ಲಿ ‘ಮಹಾಪಂಚಾಯತ್’ನಲ್ಲಿ ಭಾಗವಹಿಸಿ ಮಾತನಾಡಿದ್ದ ಅವರು, ಜನರು ಒಟ್ಟುಗೂಡಿದಾಗ ಸರ್ಕಾರಗಳೇ ಬದಲಾಗುತ್ತವೆ ಎಂದು ಹೇಳಿದ್ದರು. ಕೇವಲ ಜನಸಮೂಹವನ್ನು ಒಟ್ಟುಗೂಡಿಸಿದರೆ ಅದರಿಂದ ಕಾನೂನುಗಳನ್ನು ಹಿಂತೆಗೆದುಕೊಳ್ಳಲು ಆಗುವುದಿಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಕ್ಕೆ ಈ ರೀತಿ ಟಿಕಾಯತ್ ತಿರುಗೇಟು ನೀಡಿದ್ದರು.