ಶಿವಸೇನಾ ಶಾಸಕರ ಬಂಡಾಯದಿಂದಾಗಿ ಮಹಾ ವಿಕಾಸ ಆಘಾಡಿ (ಎಂವಿಎ) ಸರ್ಕಾರದಲ್ಲಿ ಅಸ್ಥಿರತೆ ಎದುರಾಗಿದ್ದು, ಈ ಸಮಯದಲ್ಲಿ ರಾಜ್ಯಪಾಲರ ಉಪಸ್ಥಿತಿಯು ಮಹತ್ವ ಪಡೆದಿದೆ. ಸರ್ಕಾರಕ್ಕೆ ಶಾಸಕರ ಬೆಂಬಲವನ್ನು ಸಾಬೀತು ಪಡಿಸಲು ರಾಜ್ಯಪಾಲರು ಸೂಚಿಸಬಹುದಾಗಿದೆ. ವಿಶ್ವಾಸ ಮತ ಯಾಚನೆ ಅಥವಾ ಉದ್ಧವ್ ಠಾಕ್ರೆ ಅವರ ಸರ್ಕಾರ ಪ್ರಸ್ತಾಪಿಸಿದರೆ, ವಿಧಾನಸಭೆಯನ್ನು ವಿಸರ್ಜಿಸುವ ಅಧಿಕಾರ ರಾಜ್ಯಪಾಲರಿಗಿದೆ.