<p><strong>ಗುವಾಹಟಿ: ಅ</strong>ಸ್ಸಾಂ ಮತ್ತು ವಿಜೋರಾಂ ರಾಜ್ಯಗಳ ನಡುವೆ ಶಾಂತಿ ನೆಲೆಸುತ್ತದೆ ಎಂದಾದರೆ ನಾನು ಮಿಜೋರಾಂ ಪೊಲೀಸರಿಂದ ಬಂಧನಕ್ಕೊಳಗಾಗಲು ಸಿದ್ಧ ಎಂದು ಅಸ್ಸಾಂ ಮುಖ್ಯಮಂತ್ರಿಹಿಮಂತ ಬಿಸ್ವ ಶರ್ಮಾ ಭಾನುವಾರ ಹೇಳಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/explainer/explainer-assam-mizoram-border-dispute-police-clash-852169.html" itemprop="url">EXPLAINER| ಅಸ್ಸಾಂ–ಮಿಜೋರಾಂ ನಡುವೆ ಏಕೆ ಸಂಘರ್ಷ? ಬ್ರಿಟಿಷ್ ಕಾಲದಿಂದ ಜೀವಂತ </a></p>.<p>ಸುಮಾರು 165 ಕಿ.ಮೀ ಗಡಿ ಹಂಚಿಕೊಂಡಿರುವ ಅಸ್ಸಾಂ ಮತ್ತು ಮಿಜೋರಾಂ ನಡುವೆ ಜುಲೈ 26ರಂದು ಸಂಘರ್ಷ ನಡೆದಿದ್ದು, 6 ಮಂದಿ ಪೊಲೀಸರು, ಒಬ್ಬ ನಾಗರಿಕ ಮೃತಪಟ್ಟಿದ್ದರು. ಈ ವಿಚಾರ ಎರಡೂ ರಾಜ್ಯಗಳ ನಡುವಿನ ವೈಮನಸ್ಸಿಗೆ ಕಾರಣವಾಗಿದೆ. ಎರಡೂ ಕಡೆಯ ಪೊಲೀಸರು ಪರಸ್ಪರರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>ಮಾತುಕತೆ ಮಾತ್ರ ವಿವಾದವನ್ನು ಬಗೆಹರಿಸಲು ನೆರವಾಗುತ್ತದೆ ಎಂದು ಪ್ರತಿಪಾದಿಸಿರುವ ಅಸ್ಸಾಂ ಮುಖ್ಯಮಂತ್ರಿ, ಒಂದುವೇಳೆ ಮಿಜೋರಾಂ ಪೊಲೀಸರಿಂದ ಸಮನ್ಸ್ ಬಂದರೆ, ಅದರಿಂದ ತಪ್ಪಿಸಿಕೊಳ್ಳಲು ಜಾಮೀನು ಪಡೆಯುವುದಿಲ್ಲ ಎಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.</p>.<p>ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ವಿರುದ್ಧ ದಾಖಲಾಗಿರುವ ಎಫ್ಐಆರ್ ಅನ್ನು ಹಿಂಪಡೆಯಲು ಮಿಜೋರಾಂ ಸರ್ಕಾರ ಸಿದ್ಧವಾಗಿದೆ ಎಂದು ಅಲ್ಲಿನ ಮುಖ್ಯ ಕಾರ್ಯದರ್ಶಿ ಲಾಲ್ನುನ್ಮಾವಿಯಾ ಚುವಾಂಗೊ ಭಾನುವಾರ ಹೇಳಿದ್ದರು. ಇದೇ ಹಿನ್ನೆಲೆಯಲ್ಲಿ ಶರ್ಮಾ ಈ ರೀತಿಯ ಹೇಳಿಕೆ ನೀಡಿದ್ದಾರೆ.</p>.<p>‘ನನಗೆ ಸಮನ್ಸ್ ನೀಡಿದರೆ, ಸಿಲ್ಚಾರ್ನಿಂದ ವೈರೆಂಗ್ಟೆ (ಅಸ್ಸಾಂ ಅಧಿಕಾರಿಗಳನ್ನು ಕರೆಸಿಕೊಂಡ ಸ್ಥಳ)ಕ್ಕೆ` ಪಾದಯಾತ್ರೆ ಮೂಲಕ ಹೋಗಿ ತನಿಖೆಗೆ ಒಳಪಡುತ್ತೇನೆ. ಪರಿಸ್ಥಿತಿ ಸಾಮಾನ್ಯ ಸ್ಥಿತಿಗೆ ಬರಲು ಅವರು ನನ್ನನ್ನು ಬಂಧಿಸಿದರೆ, ನಾನು ಅದಕ್ಕೆ ಸಿದ್ಧ. ನಾನು ಗುವಾಹಟಿ ಹೈಕೋರ್ಟ್ನಿಂದ ಜಾಮೀನು ಪಡೆಯಲು ಬಯಸುವುದಿಲ್ಲ,’ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ: ಅ</strong>ಸ್ಸಾಂ ಮತ್ತು ವಿಜೋರಾಂ ರಾಜ್ಯಗಳ ನಡುವೆ ಶಾಂತಿ ನೆಲೆಸುತ್ತದೆ ಎಂದಾದರೆ ನಾನು ಮಿಜೋರಾಂ ಪೊಲೀಸರಿಂದ ಬಂಧನಕ್ಕೊಳಗಾಗಲು ಸಿದ್ಧ ಎಂದು ಅಸ್ಸಾಂ ಮುಖ್ಯಮಂತ್ರಿಹಿಮಂತ ಬಿಸ್ವ ಶರ್ಮಾ ಭಾನುವಾರ ಹೇಳಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/explainer/explainer-assam-mizoram-border-dispute-police-clash-852169.html" itemprop="url">EXPLAINER| ಅಸ್ಸಾಂ–ಮಿಜೋರಾಂ ನಡುವೆ ಏಕೆ ಸಂಘರ್ಷ? ಬ್ರಿಟಿಷ್ ಕಾಲದಿಂದ ಜೀವಂತ </a></p>.<p>ಸುಮಾರು 165 ಕಿ.ಮೀ ಗಡಿ ಹಂಚಿಕೊಂಡಿರುವ ಅಸ್ಸಾಂ ಮತ್ತು ಮಿಜೋರಾಂ ನಡುವೆ ಜುಲೈ 26ರಂದು ಸಂಘರ್ಷ ನಡೆದಿದ್ದು, 6 ಮಂದಿ ಪೊಲೀಸರು, ಒಬ್ಬ ನಾಗರಿಕ ಮೃತಪಟ್ಟಿದ್ದರು. ಈ ವಿಚಾರ ಎರಡೂ ರಾಜ್ಯಗಳ ನಡುವಿನ ವೈಮನಸ್ಸಿಗೆ ಕಾರಣವಾಗಿದೆ. ಎರಡೂ ಕಡೆಯ ಪೊಲೀಸರು ಪರಸ್ಪರರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>ಮಾತುಕತೆ ಮಾತ್ರ ವಿವಾದವನ್ನು ಬಗೆಹರಿಸಲು ನೆರವಾಗುತ್ತದೆ ಎಂದು ಪ್ರತಿಪಾದಿಸಿರುವ ಅಸ್ಸಾಂ ಮುಖ್ಯಮಂತ್ರಿ, ಒಂದುವೇಳೆ ಮಿಜೋರಾಂ ಪೊಲೀಸರಿಂದ ಸಮನ್ಸ್ ಬಂದರೆ, ಅದರಿಂದ ತಪ್ಪಿಸಿಕೊಳ್ಳಲು ಜಾಮೀನು ಪಡೆಯುವುದಿಲ್ಲ ಎಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.</p>.<p>ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ವಿರುದ್ಧ ದಾಖಲಾಗಿರುವ ಎಫ್ಐಆರ್ ಅನ್ನು ಹಿಂಪಡೆಯಲು ಮಿಜೋರಾಂ ಸರ್ಕಾರ ಸಿದ್ಧವಾಗಿದೆ ಎಂದು ಅಲ್ಲಿನ ಮುಖ್ಯ ಕಾರ್ಯದರ್ಶಿ ಲಾಲ್ನುನ್ಮಾವಿಯಾ ಚುವಾಂಗೊ ಭಾನುವಾರ ಹೇಳಿದ್ದರು. ಇದೇ ಹಿನ್ನೆಲೆಯಲ್ಲಿ ಶರ್ಮಾ ಈ ರೀತಿಯ ಹೇಳಿಕೆ ನೀಡಿದ್ದಾರೆ.</p>.<p>‘ನನಗೆ ಸಮನ್ಸ್ ನೀಡಿದರೆ, ಸಿಲ್ಚಾರ್ನಿಂದ ವೈರೆಂಗ್ಟೆ (ಅಸ್ಸಾಂ ಅಧಿಕಾರಿಗಳನ್ನು ಕರೆಸಿಕೊಂಡ ಸ್ಥಳ)ಕ್ಕೆ` ಪಾದಯಾತ್ರೆ ಮೂಲಕ ಹೋಗಿ ತನಿಖೆಗೆ ಒಳಪಡುತ್ತೇನೆ. ಪರಿಸ್ಥಿತಿ ಸಾಮಾನ್ಯ ಸ್ಥಿತಿಗೆ ಬರಲು ಅವರು ನನ್ನನ್ನು ಬಂಧಿಸಿದರೆ, ನಾನು ಅದಕ್ಕೆ ಸಿದ್ಧ. ನಾನು ಗುವಾಹಟಿ ಹೈಕೋರ್ಟ್ನಿಂದ ಜಾಮೀನು ಪಡೆಯಲು ಬಯಸುವುದಿಲ್ಲ,’ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>