ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಮಾಚಲ ಪ್ರದೇಶದಲ್ಲಿ ಭೂಕುಸಿತ: 10 ಮಂದಿ ಸಾವು, 13 ಮಂದಿ ರಕ್ಷಣೆ

Last Updated 11 ಆಗಸ್ಟ್ 2021, 14:54 IST
ಅಕ್ಷರ ಗಾತ್ರ

ಶಿಮ್ಲಾ: ಹಿಮಾಚಲ ಪ್ರದೇಶದ ಕಿನ್ನೌರ್‌ ಜಿಲ್ಲೆಯಲ್ಲಿ ಬುಧವಾರ ಭಾರೀ ಪ್ರಮಾಣದಲ್ಲಿ ಭೂಕುಸಿತ ಸಂಭವಿಸಿದೆ. ಇದರಿಂದಾಗಿ ಬಸ್‌ ಮತ್ತು ಇತರೆ ವಾಹನಗಳು ಸಿಲುಕಿಕೊಂಡಿದ್ದು, 10 ಮಂದಿ ಮೃತಪಟ್ಟಿದ್ದು, 13 ಮಂದಿಯನ್ನು ರಕ್ಷಿಸಲಾಗಿದೆ.

ಇದುವರೆಗೆ ಹತ್ತು ಶವಗಳನ್ನು ಹೊರತೆಗೆಯಲಾಗಿದೆ. 13 ಮಂದಿ ಗಾಯಾಳುಗಳನ್ನು ರಕ್ಷಿಸಿದ್ದು, ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅಬಿದ್‌ ಹುಸೇನ್‌ ಸಾದಿಖ್‌ ಹೇಳಿದ್ದಾರೆ.

ಅವಶೇಷಗಳ ಅಡಿಯಲ್ಲಿ ಮತ್ತಷ್ಟು ಮಂದಿ ಸಿಲುಕಿರುವ ಸಾಧ್ಯತೆಯಿದ್ದು, ರಾಜ್ಯ ವಿಪತ್ತು ನಿರ್ವಹಣಾ ಪಡೆ ಕಾರ್ಯಾಚರಣೆ ಮುಂದುವರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT