ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರಿನಡಿ ಯುವತಿಯ ಮೃತದೇಹ ಎಳೆದೊಯ್ದ ಪ್ರಕರಣ: 11 ಪೊಲೀಸ್ ಸಿಬ್ಬಂದಿ ಅಮಾನತು

Last Updated 13 ಜನವರಿ 2023, 10:42 IST
ಅಕ್ಷರ ಗಾತ್ರ

ನವದೆಹಲಿ: ಕಾರಿನಡಿ ಸಿಲುಕಿದ್ದ ಯುವತಿಯ ಮೃತದೇಹವನ್ನು ಎಳೆದೊಯ್ದ ಪ್ರಕರಣ ನಡೆದ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ರೋಹಿಣಿ ಜಿಲ್ಲೆಯ 11 ಸಿಬ್ಬಂದಿಯನ್ನು ದೆಹಲಿ ಪೊಲೀಸ್ ಇಲಾಖೆ ಅಮಾನತು ಮಾಡಿದೆ.

ಜನವರಿ 1 ರಂದು ಅಂಜಲಿ ಸಿಂಗ್ (20) ಎಂಬ ಯುವತಿಯು ಚಾಲನೆ ಮಾಡುತ್ತಿದ್ದ ಸ್ಕೂಟಿಗೆ ಕಾರು ಡಿಕ್ಕಿ ಹೊಡೆದಿತ್ತು. ಕಾರಿನಡಿ ಯುವತಿ ಸಿಲುಕಿರುವುದು ತಿಳಿದಿದ್ದರೂ ಆರೋಪಿಗಳು 12 ಕಿ.ಮೀ.ವರೆಗೆ ಕಾರನ್ನು ನಿಲ್ಲಿಸದೆ ಸಾಗಿದ್ದರು. ಈ ಪ್ರಕರಣ ದೆಹಲಿಯ ಹೊರಭಾಗದ ಸುಲ್ತಾನ್‌ಪುರಿಯಲ್ಲಿ ವರದಿಯಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಆಗ ಘಟನಾ ಸ್ಥಳದ ವ್ಯಾಪ್ತಿಯಲ್ಲಿನ ಪೊಲೀಸ್‌ ನಿಯಂತ್ರಣ ಕೊಠಡಿ ಹಾಗೂ ರಾತ್ರಿ ಗಸ್ತಿನಲ್ಲಿದ್ದ ಎಲ್ಲ ಸಿಬ್ಬಂದಿಯನ್ನು ಕರ್ತವ್ಯಲೋಪದ ಆರೋಪದ ಮೇಲೆ ಅಮಾನತುಗೊಳಿಸುವಂತೆ ಕೇಂದ್ರ ಗೃಹ ಸಚಿವಾಲಯವು ದೆಹಲಿ ಪೊಲೀಸ್‌ ಇಲಾಖೆಗೆ ಸೂಚನೆ ನೀಡಿತ್ತು.

ಈ ಪ್ರಕರಣ ಸಂಬಂಧ ಪೊಲೀಸರು ಈ ವರೆಗೆ 7 ಆರೋಪಿಗಳನ್ನು ಬಂಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT