ನವದೆಹಲಿ: ಕಾರಿನಡಿ ಸಿಲುಕಿದ್ದ ಯುವತಿಯ ಮೃತದೇಹವನ್ನು ಎಳೆದೊಯ್ದ ಪ್ರಕರಣ ನಡೆದ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ರೋಹಿಣಿ ಜಿಲ್ಲೆಯ 11 ಸಿಬ್ಬಂದಿಯನ್ನು ದೆಹಲಿ ಪೊಲೀಸ್ ಇಲಾಖೆ ಅಮಾನತು ಮಾಡಿದೆ.
ಜನವರಿ 1 ರಂದು ಅಂಜಲಿ ಸಿಂಗ್ (20) ಎಂಬ ಯುವತಿಯು ಚಾಲನೆ ಮಾಡುತ್ತಿದ್ದ ಸ್ಕೂಟಿಗೆ ಕಾರು ಡಿಕ್ಕಿ ಹೊಡೆದಿತ್ತು. ಕಾರಿನಡಿ ಯುವತಿ ಸಿಲುಕಿರುವುದು ತಿಳಿದಿದ್ದರೂ ಆರೋಪಿಗಳು 12 ಕಿ.ಮೀ.ವರೆಗೆ ಕಾರನ್ನು ನಿಲ್ಲಿಸದೆ ಸಾಗಿದ್ದರು. ಈ ಪ್ರಕರಣ ದೆಹಲಿಯ ಹೊರಭಾಗದ ಸುಲ್ತಾನ್ಪುರಿಯಲ್ಲಿ ವರದಿಯಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಆಗ ಘಟನಾ ಸ್ಥಳದ ವ್ಯಾಪ್ತಿಯಲ್ಲಿನ ಪೊಲೀಸ್ ನಿಯಂತ್ರಣ ಕೊಠಡಿ ಹಾಗೂ ರಾತ್ರಿ ಗಸ್ತಿನಲ್ಲಿದ್ದ ಎಲ್ಲ ಸಿಬ್ಬಂದಿಯನ್ನು ಕರ್ತವ್ಯಲೋಪದ ಆರೋಪದ ಮೇಲೆ ಅಮಾನತುಗೊಳಿಸುವಂತೆ ಕೇಂದ್ರ ಗೃಹ ಸಚಿವಾಲಯವು ದೆಹಲಿ ಪೊಲೀಸ್ ಇಲಾಖೆಗೆ ಸೂಚನೆ ನೀಡಿತ್ತು.
ಈ ಪ್ರಕರಣ ಸಂಬಂಧ ಪೊಲೀಸರು ಈ ವರೆಗೆ 7 ಆರೋಪಿಗಳನ್ನು ಬಂಧಿಸಿದ್ದಾರೆ.
Kanjhawala Death Case: On MHA's recommendation, 11 personnel suspended for negligence while on duty