ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೈಲಟ್‌ಗೆ ಹೃದಯಾಘಾತ; ವಿಮಾನ ತುರ್ತು ಭೂಸ್ಪರ್ಶ: 11 ಗಂಟೆಗಳ ನಂತರ ಮತ್ತೆ ಸಂಚಾರ

Last Updated 28 ಆಗಸ್ಟ್ 2021, 5:47 IST
ಅಕ್ಷರ ಗಾತ್ರ

ನಾಗಪುರ: ಪೈಲಟ್‌ಗೆ ಹೃದಯಾಘಾತ ಆದ ಕಾರಣ, ಬಾಂಗ್ಲಾದೇಶದ ‘ಬಿಮನ್ ಏರ್‌ಲೈನ್ಸ್‌’ನ ವಿಮಾನವೊಂದು ನಾಗಪುರದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು, ಸುಮಾರು 11 ಗಂಟೆಗಳ ನಂತರ ತನ್ನ ಸಂಚಾರವನ್ನು ಪುನರಾರಂಭಿಸಿತು.

ಮಸ್ಕತ್‌ನಿಂದ ಢಾಕಾಗೆ 126 ಪ್ರಯಾಣಿಕರನ್ನು ಹೊತ್ತು ಹೊರಟಿದ್ದ ಬಾಂಗ್ಲಾದೇಶ ವಿಮಾನದ ಪೈಲಟ್‌ಗೆ ದಾರಿ ಮಧ್ಯೆ ಹೃದಯಾಘಾತವಾಯಿತು. ಹಾಗಾಗಿ ಶುಕ್ರವಾರ ಬೆಳಿಗ್ಗೆ ಸುಮಾರು 11.40ರ ಸುಮಾರಿಗೆ ನಾಗಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿತ್ತು.

ಹೃದಯಾಘಾತಕ್ಕೆ ಒಳಗಾಗಿರುವ ಪೈಲಟ್‌ ಪರಿಸ್ಥಿತಿ ಈಗಲೂ ಗಂಭೀರವಾಗಿದ್ದು, ಅವರು ವಿಮಾನ ನಿಲ್ದಾಣಕ್ಕೆ 10 ಕಿ.ಮೀ ದೂರವಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಾಂಗ್ಲಾದೇಶದ ಬಿಮಾನ್ ಏರ್‌ಲೈನ್ಸ್‌ ಸಂಸ್ಥೆ ಪರ್ಯಾಯ ಸಿಬ್ಬಂದಿ ವ್ಯವಸ್ಥೆ ಮಾಡಿದ ನಂತರ, ವಿಮಾನವು ಶುಕ್ರವಾರ ರಾತ್ರಿ 10.37ಕ್ಕೆ ಪ್ರಯಾಣಿಕರೊಂದಿಗೆ ಢಾಕಾದತ್ತ ಹೊರಟಿತು ಎಂದು ನಾಗಪುರ ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆಗೆ ಮಾಹಿತಿ ನೀಡಿದ್ದಾರೆ.

ಢಾಕಾದತ್ತ ಹೊರಟಿದ್ದ ವಿಮಾನ, ರಾಯಪುರ ಸಮೀಪದಲ್ಲಿದ್ದಾಗ ಪೈಲಟ್‌ಗೆ ಹೃದಯಾಘಾತವಾಯಿತು. ವಿಮಾನ ಸಿಬ್ಬಂದಿ ಕೋಲ್ಕತ್ತ ವಾಯು ಸಂಚಾರ ನಿಯಂತ್ರಣ ಕೇಂದ್ರವನ್ನು (ಎಟಿಸಿ) ಸಂಪರ್ಕಿಸಿದಾಗ, ಹತ್ತಿರದಲ್ಲಿರುವ ನಾಗಪುರ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್‌ ಮಾಡಲು ಸೂಚಿಸಿತು.

ಎಟಿಸಿ ಸೂಚನೆ ಮೇರೆಗೆ ಸಹ ಪೈಲಟ್‌ ನಾಗಪುರದಲ್ಲಿ ವಿಮಾನವನ್ನು ತುರ್ತು ಲ್ಯಾಂಡಿಂಗ್ ಮಾಡಿದರು ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT