ಮುಂಬೈ: ಮಹಾರಾಷ್ಟ್ರದ ಮುಂಬೈ– ಗೋವಾ ಹೆದ್ದಾರಿಯಲ್ಲಿ ಗುರುವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ 11 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.
ರಾಯಗಡ ಜಿಲ್ಲೆಯ ರೆಪೋಲಿ ಹಾಗೂ ಸಿಂಧುದುರ್ಗ ಜಿಲ್ಲೆಯ ಕಣಕವಲಿಯಲ್ಲಿ ಅಪಘಾತಗಳು ಸಂಭವಿಸಿವೆ.
ರಾಯಗಡದಲ್ಲಿ ನಡೆದ ಕಾರು ಅಪಘಾತದಲ್ಲಿ ಒಂದೇ ಕುಟುಂಬದ ಒಂಬತ್ತು ಮಂದಿ ಮೃತಪಟ್ಟಿದ್ದು, 4 ವರ್ಷದ ಬಾಲಕನೊಬ್ಬ ಬದುಕುಳಿದಿದ್ದಾನೆ.
ಮುಂಬೈನಿಂದ ಗೋವಾಗೆ ತೆರಳುತ್ತಿದ್ದ ಬಸ್ವೊಂದು ಸಿಂಧುದುರ್ಗದ ಗಡ್ ನದಿಯ ಸೇತುವೆ ಬಳಿ ಉರುಳಿಬಿದ್ದು ಇಬ್ಬರು ಪ್ರಯಾಣಿಕರು ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ 23 ಮಂದಿ ಗಾಯಗೊಂಡಿದ್ದಾರೆ.