ತ್ರಿಪುರಾ ಹೊಸ ಸಂಪುಟ: 11 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ

ಅಗರ್ತಲಾ: ಬಿಜೆಪಿಯ 9 ಶಾಸಕರು ಮತ್ತು ಮಿತ್ರ ಪಕ್ಷ ಇಂಡಿಜಿನಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರಾದ (ಐಪಿಎಫ್ಟಿ) ಇಬ್ಬರು ಸೇರಿ ತ್ರಿಪುರಾದ 11 ಶಾಸಕರು ಸೋಮವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ರಾಜಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ರಾಜ್ಯಪಾಲ ಎಸ್ಎನ್ ಆರ್ಯ ಅವರು ಸಂಪುಟ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಮುಖ್ಯಮಂತ್ರಿ ಮಾಣಿಕ್ ಸಾಹಾ, ಮಾಜಿ ಮುಖ್ಯಮಂತ್ರಿ ವಿಪ್ಲಬ್ ಕುಮಾರ್ ದೇವ್ ಮತ್ತು ಬಿಜೆಪಿಯ ಗಣ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.
ಪಿಎಫ್ಟಿಯ ಮೇವರ್ ಕುಮಾರ್ ಜಮಾತಿಯ ಅವರನ್ನು ಹೊರತುಪಡಿಸಿ ವಿಪ್ಲಬ್ ಕುಮಾರ್ ದೇವ್ ಸಂಪುಟದಲ್ಲಿದ್ದ ಎಲ್ಲಾ ಸಚಿವರು ಹೊಸ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ.
11 MLAs in Tripura take oath as cabinet ministers, at Raj Bhavan, in Agartala pic.twitter.com/swcXOg7nui
— ANI (@ANI) May 16, 2022
‘ಜಿಷ್ಣು ದೇವ್ ವರ್ಮಾ, ಎನ್ಸಿ ದೆಬ್ಬರ್ಮಾ (ಐಪಿಎಫ್ಟಿ), ರತನ್ ಲಾಲ್ ನಾಥ್, ಪ್ರಣಜಿತ್ ಸಿಂಗ್ ರಾಯ್, ಮನೋಜ್ ಕಾಂತಿ ದೇಬ್, ಸಂತಾನಾ ಚಕ್ಮಾ, ರಾಮ್ ಪ್ರಸಾದ್ ಪಾಲ್, ಭಗವನ್ ದಾಸ್, ಸುಶಾಂತ ಚೌಧುರಿ, ರಾಮಪಾದ ಜಮಾತಿಯ ಮತ್ತು ಪ್ರೇಮ್ ಕುಮಾರ್ ರಿಯಾಂಗ್ (ಐಪಿಎಫ್ಟಿ) ಪ್ರಮಾಣವಚನ ಸ್ವೀಕರಿಸಿದ್ದಾರೆ.
ಇದನ್ನೂ ಓದಿ: ಪ್ರಾದೇಶಿಕ ಪಕ್ಷಗಳಿಗೆ ನಮ್ಮಂತೆ ಬಿಜೆಪಿ ವಿರುದ್ಧ ಹೋರಾಡಲಾಗದು, ಆದರೆ...: ರಾಹುಲ್
ಶನಿವಾರ ಸಂಜೆ ವಿಪ್ಲವ್ ಕುಮಾರ್ ದೇವ್ ಹಠಾತ್ ರಾಜೀನಾಮೆ ನೀಡಿದ ಬಳಿಕ ಸಾಹಾ ಅವರ ಹೆಸರನ್ನು ಮುಂದಿನ ಮುಖ್ಯಮಂತ್ರಿ ಎಂದು ಬಿಜೆಪಿ ಹೈಕಮಾಂಡ್ ಘೋಷಿಸಿತ್ತು. ಭಾನುವಾರ ಅವರು ಪ್ರಮಾಣವಚನ ಸ್ವೀಕರಿಸಿದ್ದರು.
ಇವನ್ನೂ ಓದಿ.. ಚಾರ್ ಧಾಮ್ ಯಾತ್ರೆಗೆ ಹೋಗಿದ್ದ 39 ಮಂದಿ ಅನಾರೋಗ್ಯದಿಂದ ಸಾವು
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.