<p><strong>ನವದೆಹಲಿ: </strong>12ನೇ ತರಗತಿಯ ಪೂರಕ ಪರೀಕ್ಷೆ ಮತ್ತು ಖಾಸಗಿ ಅಭ್ಯರ್ಥಿಗಳ ಪರೀಕ್ಷೆಗಳನ್ನು ರದ್ದುಪಡಿಸಲು ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಗೆ (ಸಿಬಿಎಸ್ಇ) ನಿರ್ದೇಶನ ನೀಡುವಂತೆ ಕೋರಿ 1,152 ವಿದ್ಯಾರ್ಥಿಗಳು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.</p>.<p>ಪೂರಕ ಮತ್ತು ಖಾಸಗಿ ಅಭ್ಯರ್ಥಿಗಳ ಪರೀಕ್ಷೆಗಳನ್ನು ಭೌತಿಕ ಕ್ರಮದಲ್ಲಿ ನಡೆಸಲು ಮಂಡಳಿ ಮುಂದಾಗಿರುವುದು ಅದರ ಇಬ್ಬಗೆಯ ನೀತಿಯಾಗಿದೆ ಎಂದು ಅರ್ಜಿದಾರರು ದೂರಿದ್ದಾರೆ.</p>.<p>‘12ನೇ ತರಗತಿಯ ಸಾಮಾನ್ಯ ವಿದ್ಯಾರ್ಥಿಗಳಿಗೆ ಫಲಿತಾಂಶ ಪ್ರಕಟಿಸಲು ಅನುಸರಿಸುವ ಮೌಲ್ಯಮಾಪನ ವಿಧಾನವನ್ನೇ ನಮಗೂ ಅನುಸರಿಸಿ, ತ್ವರಿತವಾಗಿ ಫಲಿತಾಂಶ ಪ್ರಕಟಿಸಲು ನಿರ್ದೇಶಿಸಬೇಕು’ ಎಂದು ಅರ್ಜಿಯಲ್ಲಿ ಕೋರಲಾಗಿದೆ.</p>.<p>‘ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಮತ್ತು ಖಾಸಗಿ ಅಭ್ಯರ್ಥಿಗಳು ಭೌತಿಕವಾಗಿ ಪರೀಕ್ಷೆಗೆ ಹಾಜರಾಗಬೇಕು ಎಂಬ ಮಂಡಳಿಯ ನಿರ್ಧಾರವು, ಲಕ್ಷಾಂತರ ವಿದ್ಯಾರ್ಥಿಗಳ ಜೀವವನ್ನು ಅಪಾಯಕ್ಕೆ ಸಿಲುಕಿಸುತ್ತದೆ. ಅಲ್ಲದೆ ಅದು, ಸಂವಿಧಾನ ನೀಡಿರುವ ಜೀವಿಸುವ ಹಕ್ಕಿನ ಉಲ್ಲಂಘನೆಯಾಗುತ್ತದೆ‘ ಎಂದು ಅರ್ಜಿಯಲ್ಲಿ ಪ್ರತಿಪಾದಿಸಲಾಗಿದೆ. ಸುಪ್ರೀಂ ಕೋರ್ಟ್ ಈ ಕುರಿತ ವಿಚಾರಣೆಯಲ್ಲಿ ಸೋಮವಾರ ಕೈಗೆತ್ತಿಕೊಳ್ಳಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>12ನೇ ತರಗತಿಯ ಪೂರಕ ಪರೀಕ್ಷೆ ಮತ್ತು ಖಾಸಗಿ ಅಭ್ಯರ್ಥಿಗಳ ಪರೀಕ್ಷೆಗಳನ್ನು ರದ್ದುಪಡಿಸಲು ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಗೆ (ಸಿಬಿಎಸ್ಇ) ನಿರ್ದೇಶನ ನೀಡುವಂತೆ ಕೋರಿ 1,152 ವಿದ್ಯಾರ್ಥಿಗಳು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.</p>.<p>ಪೂರಕ ಮತ್ತು ಖಾಸಗಿ ಅಭ್ಯರ್ಥಿಗಳ ಪರೀಕ್ಷೆಗಳನ್ನು ಭೌತಿಕ ಕ್ರಮದಲ್ಲಿ ನಡೆಸಲು ಮಂಡಳಿ ಮುಂದಾಗಿರುವುದು ಅದರ ಇಬ್ಬಗೆಯ ನೀತಿಯಾಗಿದೆ ಎಂದು ಅರ್ಜಿದಾರರು ದೂರಿದ್ದಾರೆ.</p>.<p>‘12ನೇ ತರಗತಿಯ ಸಾಮಾನ್ಯ ವಿದ್ಯಾರ್ಥಿಗಳಿಗೆ ಫಲಿತಾಂಶ ಪ್ರಕಟಿಸಲು ಅನುಸರಿಸುವ ಮೌಲ್ಯಮಾಪನ ವಿಧಾನವನ್ನೇ ನಮಗೂ ಅನುಸರಿಸಿ, ತ್ವರಿತವಾಗಿ ಫಲಿತಾಂಶ ಪ್ರಕಟಿಸಲು ನಿರ್ದೇಶಿಸಬೇಕು’ ಎಂದು ಅರ್ಜಿಯಲ್ಲಿ ಕೋರಲಾಗಿದೆ.</p>.<p>‘ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಮತ್ತು ಖಾಸಗಿ ಅಭ್ಯರ್ಥಿಗಳು ಭೌತಿಕವಾಗಿ ಪರೀಕ್ಷೆಗೆ ಹಾಜರಾಗಬೇಕು ಎಂಬ ಮಂಡಳಿಯ ನಿರ್ಧಾರವು, ಲಕ್ಷಾಂತರ ವಿದ್ಯಾರ್ಥಿಗಳ ಜೀವವನ್ನು ಅಪಾಯಕ್ಕೆ ಸಿಲುಕಿಸುತ್ತದೆ. ಅಲ್ಲದೆ ಅದು, ಸಂವಿಧಾನ ನೀಡಿರುವ ಜೀವಿಸುವ ಹಕ್ಕಿನ ಉಲ್ಲಂಘನೆಯಾಗುತ್ತದೆ‘ ಎಂದು ಅರ್ಜಿಯಲ್ಲಿ ಪ್ರತಿಪಾದಿಸಲಾಗಿದೆ. ಸುಪ್ರೀಂ ಕೋರ್ಟ್ ಈ ಕುರಿತ ವಿಚಾರಣೆಯಲ್ಲಿ ಸೋಮವಾರ ಕೈಗೆತ್ತಿಕೊಳ್ಳಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>