<p>ಫತೇಪುರ/ಕೌಶಂಬಿ/ಫಿರೋಜಾಬಾದ್: ಕಳೆದ 24 ಗಂಟೆಗಳಲ್ಲಿ ಉತ್ತರಪ್ರದೇಶದ ಫತೇಪುರ, ಕೌಶಂಬಿ ಮತ್ತು ಫಿರೋಜಾಬಾದ್ ಜಿಲ್ಲೆಗಳಲ್ಲಿ ಸಿಡಿಲು ಬಡಿದು ಕನಿಷ್ಠ 12 ಮಂದಿ ಮೃತಪಟ್ಟಿದ್ಧಾರೆ.</p>.<p>‘ಫತೇಪುರದಲ್ಲಿ ಮಹಿಳೆಯರು ಸೇರಿದಂತೆ ಐದು ಮಂದಿ ಮತ್ತು ಫಿರೋಜಾಬಾದ್ನಲ್ಲಿ ಮೂವರು ಮತ್ತು ಕೌಶಂಬಿಯಲ್ಲಿ ನಾಲ್ವರು ಸಿಡಿಲಿನ ಆಘಾತದಿಂದ ಮೃತಪಟ್ಟಿದ್ದಾರೆ’ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದರು.</p>.<p>ಫತೇಪುರದ ಮೃತಾಳುಗಳನ್ನು ಸೊನಿಯಾ(54), ಮಥುರಾ(37), ಶಿವಕಾಳಿ(60), ಕೌಶಲ್ಯ ದೇವಿ(50), ದಿನೇಶ್ ಕುಮಾರ್ ಪಾಲ್(35) ಎಂದು ಗುರುತಿಸಲಾಗಿದೆ.</p>.<p>‘ಕಲ್ಯಾಣಪುರ ಪ್ರದೇಶದ ಗುಮದಾಪುರ ಗ್ರಾಮದಲ್ಲಿ ಸಿಡಿಲು ಬಡಿತದಿಂದಾಗಿ ಇಬ್ಬರು ಸಹೋದರರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಪರಿಸ್ಥಿತಿ ಸ್ಥಿರವಾಗಿದೆ’ ಎಂದು ಪೊಲೀಸರು ಮಾಹಿತಿ ನೀಡಿದರು.</p>.<p>ಕೌಶಂಬಿ ಜಿಲ್ಲೆಯಲ್ಲಿ ಮೂರತ್ ಧ್ವಜ್(50), ರಾಮಚಂದ್ರ(32), ಮಯಾಂಕ್ ಸಿಂಗ್(15) ಅವರು ಮಿಂಚಿಗೆ ಸಂಬಂಧಿಸಿದ ಪ್ರತ್ಯೇಕ ಘಟನೆಗಳಲ್ಲಿ ಮೃತಪಟ್ಟಿದ್ದಾರೆ. ಫಿರೋಜಾಬಾದ್ ಜಿಲ್ಲೆಯ ರೈತರುಗಳಾದ ಹೇಮರಾಜ್(50), ರಾಮಸೇವಕ್(40),ಅಮರ್ ಸಿಂಗ್ ಅವರು ಸಿಡಿಲು ಬಡಿದು ಸಾವಿಗೀಡಾಗಿದ್ದಾರೆ.</p>.<p>ಮೃತರ ಕುಟುಂಬಕ್ಕೆ ಪರಿಹಾರ ಧನ ಮತ್ತು ನೆರವು ಒದಗಿಸುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಫತೇಪುರ/ಕೌಶಂಬಿ/ಫಿರೋಜಾಬಾದ್: ಕಳೆದ 24 ಗಂಟೆಗಳಲ್ಲಿ ಉತ್ತರಪ್ರದೇಶದ ಫತೇಪುರ, ಕೌಶಂಬಿ ಮತ್ತು ಫಿರೋಜಾಬಾದ್ ಜಿಲ್ಲೆಗಳಲ್ಲಿ ಸಿಡಿಲು ಬಡಿದು ಕನಿಷ್ಠ 12 ಮಂದಿ ಮೃತಪಟ್ಟಿದ್ಧಾರೆ.</p>.<p>‘ಫತೇಪುರದಲ್ಲಿ ಮಹಿಳೆಯರು ಸೇರಿದಂತೆ ಐದು ಮಂದಿ ಮತ್ತು ಫಿರೋಜಾಬಾದ್ನಲ್ಲಿ ಮೂವರು ಮತ್ತು ಕೌಶಂಬಿಯಲ್ಲಿ ನಾಲ್ವರು ಸಿಡಿಲಿನ ಆಘಾತದಿಂದ ಮೃತಪಟ್ಟಿದ್ದಾರೆ’ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದರು.</p>.<p>ಫತೇಪುರದ ಮೃತಾಳುಗಳನ್ನು ಸೊನಿಯಾ(54), ಮಥುರಾ(37), ಶಿವಕಾಳಿ(60), ಕೌಶಲ್ಯ ದೇವಿ(50), ದಿನೇಶ್ ಕುಮಾರ್ ಪಾಲ್(35) ಎಂದು ಗುರುತಿಸಲಾಗಿದೆ.</p>.<p>‘ಕಲ್ಯಾಣಪುರ ಪ್ರದೇಶದ ಗುಮದಾಪುರ ಗ್ರಾಮದಲ್ಲಿ ಸಿಡಿಲು ಬಡಿತದಿಂದಾಗಿ ಇಬ್ಬರು ಸಹೋದರರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಪರಿಸ್ಥಿತಿ ಸ್ಥಿರವಾಗಿದೆ’ ಎಂದು ಪೊಲೀಸರು ಮಾಹಿತಿ ನೀಡಿದರು.</p>.<p>ಕೌಶಂಬಿ ಜಿಲ್ಲೆಯಲ್ಲಿ ಮೂರತ್ ಧ್ವಜ್(50), ರಾಮಚಂದ್ರ(32), ಮಯಾಂಕ್ ಸಿಂಗ್(15) ಅವರು ಮಿಂಚಿಗೆ ಸಂಬಂಧಿಸಿದ ಪ್ರತ್ಯೇಕ ಘಟನೆಗಳಲ್ಲಿ ಮೃತಪಟ್ಟಿದ್ದಾರೆ. ಫಿರೋಜಾಬಾದ್ ಜಿಲ್ಲೆಯ ರೈತರುಗಳಾದ ಹೇಮರಾಜ್(50), ರಾಮಸೇವಕ್(40),ಅಮರ್ ಸಿಂಗ್ ಅವರು ಸಿಡಿಲು ಬಡಿದು ಸಾವಿಗೀಡಾಗಿದ್ದಾರೆ.</p>.<p>ಮೃತರ ಕುಟುಂಬಕ್ಕೆ ಪರಿಹಾರ ಧನ ಮತ್ತು ನೆರವು ಒದಗಿಸುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>