ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ: ತಲೆಗೂದಲಿಗೆ ಸೀಮೆಎಣ್ಣೆ ಹಾಕಿ ನೇರಗೊಳಿಸಲು ಯತ್ನ, ಬೆಂಕಿ ತಗುಲಿ ಬಾಲಕ ಸಾವು

Last Updated 25 ಮಾರ್ಚ್ 2021, 1:56 IST
ಅಕ್ಷರ ಗಾತ್ರ

ತಿರುವನಂತಪುರ: ಯೂಟ್ಯೂಬ್‌ ವಿಡಿಯೊವೊಂದನ್ನು ನೋಡಿಕೊಂಡು ಸೀಮೆಎಣ್ಣೆ ಮತ್ತು ಬೆಂಕಿಕಡ್ಡಿ ಬಳಸಿ ಕೂದಲನ್ನು ನೇರಗೊಳಿಸಲು ಯತ್ನಿಸಿದ 12 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ತಿರುವನಂತಪುರದ ವೆಂಗನೂರಿನಲ್ಲಿ ನಡೆದಿದೆ.

ಮೃತ ಬಾಲಕನನ್ನು ಶಿವನಾರಾಯಣನ್‌ ಎಂದು ಗುರುತಿಸಿಲಾಗಿದ್ದು, ಈತ ಏಳನೇ ತರಗತಿ ಓದುತ್ತಿದ್ದ ಎಂದು ಹೇಳಲಾಗಿದೆ.

ತನ್ನ ತಲೆ ಕೂದಲಿಗೆ ಸೀಮೆಎಣ್ಣೆ ಹಚ್ಚಿಕೊಂಡು ಬೆಂಕಿ ಕಡ್ಡಿ ಬಳಸಿ ಅದನ್ನು ನೇರಗೊಳಿಸಲು ಯತ್ನಿಸಿದ ಬಾಲಕ ಸುಟ್ಟ ಗಾಯಗಳಿಂದ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕ ಮನೆಯಲ್ಲಿ ಪೋಷಕರಿಲ್ಲದ ಸಮಯದಲ್ಲಿ ಸ್ನಾನ ಗೃಹದೊಳಗೆ ಈ ಕೃತ್ಯವನ್ನು ಪ್ರಯತ್ನಿಸಿರುವುದಾಗಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ವಿಡಿಯೊಗಳನ್ನು ನೋಡುತ್ತಿದ್ದ ಬಾಲಕ ಈ ಕೃತ್ಯಕ್ಕೆ ಕೈ ಹಾಕಿದ್ದಾನೆ ಎಂದು ಪೋಷಕರು ತಿಳಿಸಿದ್ದಾರೆ.

ಸುಟ್ಟು ಗಾಯಗೊಂಡಿದ್ದ ಬಾಲಕನ್ನು ಆಸ್ಪತ್ರಗೆ ರವಾನಿಸುವ ವೇಳೆ ಕೊನೆಯುಸಿರೆಳೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT