ಪಾಲಕ್ಕಾಡ್: ಕೇರಳದ ಪಾಲಕ್ಕಾಡ್ನಲ್ಲಿ ಆರೆಸ್ಸೆಸ್ ಕಾರ್ಯಕರ್ತ ಎಸ್.ಕೆ. ಶ್ರೀನಿವಾಸನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಇಬ್ಬರನ್ನು ಬಂಧಿಸಲಾಗಿದ್ದು, ಬಂಧಿತರ ಒಟ್ಟು ಸಂಖ್ಯೆ 13ಕ್ಕೆ ಏರಿದೆ.
ಬಂಧಿತರು ಪಿಎಫ್ಐ ಮತ್ತು ಅದರ ರಾಜಕೀಯ ಪಕ್ಷವಾದ ಎಸ್ಡಿಪಿಐಗೆ ಸೇರಿದವರು ಎಂದು ಎಡಿಜಿಪಿ ವಿಜಯ್ ಸಾಖರೆ ತಿಳಿಸಿದ್ದಾರೆ.