<p><strong>ಲಖನೌ</strong>: ಉತ್ತರ ಪ್ರದೇಶ ಪೊಲೀಸರು 2017ರಿಂದ ನಡೆಸಿದ ಎನ್ಕೌಂಟರ್ಗಳಲ್ಲಿ 139 ಅಪರಾಧಿಗಳ ಹತ್ಯೆಯಾಗಿದ್ದು, 3,196 ಮಂದಿ ಗಾಯಗೊಂಡಿದ್ದಾರೆ. ಈ ಎನ್ಕೌಂಟರ್ಗಳಲ್ಲಿ ಪೊಲೀಸ್ ಇಲಾಖೆ ತನ್ನ 13 ಸಿಬ್ಬಂದಿಯನ್ನು ಕಳೆದುಕೊಂಡಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.</p>.<p>ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಕುಖ್ಯಾತ ಅಪರಾಧಿಗಳು, ಅವರ ಸಹಚರರು ಮತ್ತು ಗೂಂಡಾಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವನಿಶ್ ಕುಮಾರ್ ಅವಸ್ಥಿ ತಿಳಿಸಿದ್ದಾರೆ.</p>.<p>‘2017ರಮಾರ್ಚ್ 20ರಿಂದ ಈ ವರ್ಷದ ಜೂನ್ 20ರವರೆಗೆ ನಡೆದ ಪೊಲೀಸ್ ಎನ್ಕೌಂಟರ್ಗಳಲ್ಲಿ 139 ಅಪರಾಧಿಗಳು ಸಾವನ್ನಪ್ಪಿದ್ದರೆ, 3,196 ಮಂದಿ ಗಾಯಗೊಂಡಿದ್ದಾರೆ. ಈ ಕಾರ್ಯಾಚರಣೆಗಳಲ್ಲಿ 13 ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದು, 1,122 ಮಂದಿ ಗಾಯಗೊಂಡಿದ್ದಾರೆ’ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>‘ಸರ್ಕಾರವು ಅಪರಾಧ ಸಹಿಸುವುದಿಲ್ಲ. ಸಂಘಟಿತ ಅಪರಾಧಗಳನ್ನು ಸಂಪೂರ್ಣ ಹತ್ತಿಕ್ಕಲಾಗಿದೆ. ದರೋಡೆಕೋರ ಕಾಯ್ದೆಯಡಿ ₹1,500 ಕೋಟಿ ಮೌಲ್ಯದ ಅಕ್ರಮ ಆಸ್ತಿ ವಶಪಡಿಸಿಕೊಳ್ಳಲಾಗಿದೆ. ಕಳೆದ ವರ್ಷದ ಜನವರಿಯಿಂದ ಇಲ್ಲಿಯವರೆಗೆ ವಶಪಡಿಸಿಕೊಂಡ ₹1,300 ಕೋಟಿಯ ಆಸ್ತಿಯನ್ನೂ ಇದು ಒಳಗೊಂಡಿದೆ’ ಎಂದು ಅವರು ಹೇಳಿದರು.</p>.<p>ದರೋಡೆಕೋರ ಕಾಯ್ದೆಯಡಿ 13,700ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಕಳೆದ ನಾಲ್ಕು ವರ್ಷಗಳಲ್ಲಿ 43,000ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ವಾರಾಣಸಿ ವಲಯದಲ್ಲಿ 420 ಪ್ರಕರಣಗಳಿದ್ದು, ₹200 ಕೋಟಿಗೂ ಹೆಚ್ಚಿನ ಆಸ್ತಿ ವಶಪಡಿಸಿಕೊಳ್ಳಲಾಗಿದೆ. ಗೋರಖ್ಪುರ ವಲಯದಲ್ಲಿ 208 ಪ್ರಕರಣಗಳಲ್ಲಿ ₹264 ಕೋಟಿ ಆಸ್ತಿ ವಶಪಡಿಸಿಕೊಳ್ಳಲಾಗಿದೆ ಎಂದು ಅವಸ್ಥಿ ತಿಳಿಸಿದ್ದಾರೆ.</p>.<p>ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿರ್ದೇಶನದ ಮೇರೆಗೆ, ತಿಂಗಳ ಪ್ರತಿ ಎರಡನೇ ಮತ್ತು ನಾಲ್ಕನೇ ಶನಿವಾರ ಜನರ ಕುಂದುಕೊರತೆಗಳನ್ನು ಆಲಿಸಲು ಮತ್ತು ಅವುಗಳನ್ನು ಪರಿಹರಿಸಲು ‘ಠಾಣಾ/ ಸಮಾಧಾನ್ ದಿವಾಸ್’ ಆಯೋಜಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ಉತ್ತರ ಪ್ರದೇಶ ಪೊಲೀಸರು 2017ರಿಂದ ನಡೆಸಿದ ಎನ್ಕೌಂಟರ್ಗಳಲ್ಲಿ 139 ಅಪರಾಧಿಗಳ ಹತ್ಯೆಯಾಗಿದ್ದು, 3,196 ಮಂದಿ ಗಾಯಗೊಂಡಿದ್ದಾರೆ. ಈ ಎನ್ಕೌಂಟರ್ಗಳಲ್ಲಿ ಪೊಲೀಸ್ ಇಲಾಖೆ ತನ್ನ 13 ಸಿಬ್ಬಂದಿಯನ್ನು ಕಳೆದುಕೊಂಡಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.</p>.<p>ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಕುಖ್ಯಾತ ಅಪರಾಧಿಗಳು, ಅವರ ಸಹಚರರು ಮತ್ತು ಗೂಂಡಾಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವನಿಶ್ ಕುಮಾರ್ ಅವಸ್ಥಿ ತಿಳಿಸಿದ್ದಾರೆ.</p>.<p>‘2017ರಮಾರ್ಚ್ 20ರಿಂದ ಈ ವರ್ಷದ ಜೂನ್ 20ರವರೆಗೆ ನಡೆದ ಪೊಲೀಸ್ ಎನ್ಕೌಂಟರ್ಗಳಲ್ಲಿ 139 ಅಪರಾಧಿಗಳು ಸಾವನ್ನಪ್ಪಿದ್ದರೆ, 3,196 ಮಂದಿ ಗಾಯಗೊಂಡಿದ್ದಾರೆ. ಈ ಕಾರ್ಯಾಚರಣೆಗಳಲ್ಲಿ 13 ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದು, 1,122 ಮಂದಿ ಗಾಯಗೊಂಡಿದ್ದಾರೆ’ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>‘ಸರ್ಕಾರವು ಅಪರಾಧ ಸಹಿಸುವುದಿಲ್ಲ. ಸಂಘಟಿತ ಅಪರಾಧಗಳನ್ನು ಸಂಪೂರ್ಣ ಹತ್ತಿಕ್ಕಲಾಗಿದೆ. ದರೋಡೆಕೋರ ಕಾಯ್ದೆಯಡಿ ₹1,500 ಕೋಟಿ ಮೌಲ್ಯದ ಅಕ್ರಮ ಆಸ್ತಿ ವಶಪಡಿಸಿಕೊಳ್ಳಲಾಗಿದೆ. ಕಳೆದ ವರ್ಷದ ಜನವರಿಯಿಂದ ಇಲ್ಲಿಯವರೆಗೆ ವಶಪಡಿಸಿಕೊಂಡ ₹1,300 ಕೋಟಿಯ ಆಸ್ತಿಯನ್ನೂ ಇದು ಒಳಗೊಂಡಿದೆ’ ಎಂದು ಅವರು ಹೇಳಿದರು.</p>.<p>ದರೋಡೆಕೋರ ಕಾಯ್ದೆಯಡಿ 13,700ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಕಳೆದ ನಾಲ್ಕು ವರ್ಷಗಳಲ್ಲಿ 43,000ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ವಾರಾಣಸಿ ವಲಯದಲ್ಲಿ 420 ಪ್ರಕರಣಗಳಿದ್ದು, ₹200 ಕೋಟಿಗೂ ಹೆಚ್ಚಿನ ಆಸ್ತಿ ವಶಪಡಿಸಿಕೊಳ್ಳಲಾಗಿದೆ. ಗೋರಖ್ಪುರ ವಲಯದಲ್ಲಿ 208 ಪ್ರಕರಣಗಳಲ್ಲಿ ₹264 ಕೋಟಿ ಆಸ್ತಿ ವಶಪಡಿಸಿಕೊಳ್ಳಲಾಗಿದೆ ಎಂದು ಅವಸ್ಥಿ ತಿಳಿಸಿದ್ದಾರೆ.</p>.<p>ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿರ್ದೇಶನದ ಮೇರೆಗೆ, ತಿಂಗಳ ಪ್ರತಿ ಎರಡನೇ ಮತ್ತು ನಾಲ್ಕನೇ ಶನಿವಾರ ಜನರ ಕುಂದುಕೊರತೆಗಳನ್ನು ಆಲಿಸಲು ಮತ್ತು ಅವುಗಳನ್ನು ಪರಿಹರಿಸಲು ‘ಠಾಣಾ/ ಸಮಾಧಾನ್ ದಿವಾಸ್’ ಆಯೋಜಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>