<p><strong>ಚಿತ್ರಕೂಟ (ಉತ್ತರ ಪ್ರದೇಶ): </strong>ಮೂವರಿಂದ ಸಾಮೂಹಿಕ ಅತ್ಯಾಚಾರಕ್ಕೊಳಗಾದ ಹದಿನೈದು ವರ್ಷದ ಬಾಲಕಿಯೊಬ್ಬಳು ನೇಣುಬಿಗಿದುಕೊಂಡು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಮಾಣಿಕ್ಪುರದಲ್ಲಿ ನಡೆದಿದೆ.</p>.<p>ಚಿತ್ರಕೂಟ ಜಿಲ್ಲೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಕಿತ್ ಮಿತ್ತಲ್ ಮಂಗಳವಾರ ಘಟನೆಯನ್ನು ಖಚಿತಪಡಿಸಿದ್ದಾರೆ.</p>.<p>ಅಕ್ಟೋಬರ್ 8ರಂದು ‘ಅರಣ್ಯ ಪ್ರದೇಶದಲ್ಲಿ ಬಾಲಕಿಯ ಮೇಲೆ ಮೂವರು ಸಾಮೂಹಿಕ ಅತ್ಯಾಚಾರವೆಸಗಿದ್ದರು’ ಎಂದುಬಾಲಕಿಯ ಕುಟುಂಬದ ಸದಸ್ಯರು ಆರೋಪಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.</p>.<p>‘ಮಗಳನ್ನು ಅತ್ಯಾಚಾರ ಎಸಗಿದ ಆರೋಪಿಗಳು, ಆಕೆಯ ಕೈಕಾಲುಗಳನ್ನು ಕಟ್ಟಿದ್ದರು. ಪೊಲೀಸರು ಆಕೆಯನ್ನು ಮನೆಗೆ ಕರೆತಂದರು. ಆದರೆ, ಪೊಲೀಸರು ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಲಿಲ್ಲ‘ ಎಂದು ಸಂತ್ರಸ್ತೆಯ ತಂದೆ ಆರೋಪಿಸಿದ್ದಾರೆ.</p>.<p>ಸಂತ್ರಸ್ತೆಯ ಕುಟುಂಬ ಸದಸ್ಯರು ನೀಡಿದ ದೂರಿನ ಅನ್ವಯ ಗ್ರಾಮದ ಮುಖಂಡ ಮಗ ಕಿಶನ್ ಉಪಾಧ್ಯಾಯ, ಆಶೀಶ್ ಮತ್ತು ಸತೀಶ್ ಎಂಬುವರ ವಿರುದ್ಧ ಐಪಿಸಿ ಮತ್ತು ಎಸ್.ಸಿ, ಎಸ್.ಟಿ ದೌರ್ಜನ್ಯ ತಡೆ ಕಾಯ್ದೆ ಮತ್ತು ಪೋಕ್ಸೊ ಕಾಯ್ದೆಯಡಿ ಬಂಧಿಸಿರುವುದಾಗಿ ಮಿತ್ತಲ್ ತಿಳಿಸಿದ್ದಾರೆ.</p>.<p>‘ಅತ್ಯಾಚಾರಕ್ಕೊಳಗಾದ ಬಾಲಕಿ ನೀಡಿದ ದೂರನ್ನು ಸ್ವೀಕರಿಸದ ಕಾರಣ, ಆಕೆ ಪ್ರಾಣ ಕಳೆದುಕೊಂಡಿದ್ದಾಳೆ‘ ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ. ಇವರ ಆರೋಪವನ್ನು ಪೊಲೀಸರು ನಿರಾಕರಿಸಿದ್ದು, ಬಾಲಕಿ ಯಾವುದೇ ದೂರನ್ನು ನೀಡಿಲ್ಲ ಎಂದಿದ್ದಾರೆ.</p>.<p>‘ಮಣರೋತ್ತರ ಪರೀಕ್ಷೆಯ ವರದಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರಾಗಿರುವುದು ದೃಢಪಟ್ಟಿಲ್ಲ. ಕೆಲವು ಮಾದರಿಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಪರೀಕ್ಷೆಗಾಗಿ ಕಳುಹಿಸಿದ್ದೇವೆ‘ ಎಂದು ಮಿತ್ತಲ್ ತಿಳಿಸಿದ್ದಾರೆ.</p>.<p>ಗ್ರಾಮದಲ್ಲಿ ಬುಧವಾರ ಬಾಲಕಿಯ ಮೃತದೇಹದ ಅಂತ್ಯಕ್ರಿಯೆ ನಡೆಯಲಿದ್ದು, ಸೂಕ್ತ ಭದ್ರತಾ ವ್ಯವಸ್ಥೆ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರಕೂಟ (ಉತ್ತರ ಪ್ರದೇಶ): </strong>ಮೂವರಿಂದ ಸಾಮೂಹಿಕ ಅತ್ಯಾಚಾರಕ್ಕೊಳಗಾದ ಹದಿನೈದು ವರ್ಷದ ಬಾಲಕಿಯೊಬ್ಬಳು ನೇಣುಬಿಗಿದುಕೊಂಡು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಮಾಣಿಕ್ಪುರದಲ್ಲಿ ನಡೆದಿದೆ.</p>.<p>ಚಿತ್ರಕೂಟ ಜಿಲ್ಲೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಕಿತ್ ಮಿತ್ತಲ್ ಮಂಗಳವಾರ ಘಟನೆಯನ್ನು ಖಚಿತಪಡಿಸಿದ್ದಾರೆ.</p>.<p>ಅಕ್ಟೋಬರ್ 8ರಂದು ‘ಅರಣ್ಯ ಪ್ರದೇಶದಲ್ಲಿ ಬಾಲಕಿಯ ಮೇಲೆ ಮೂವರು ಸಾಮೂಹಿಕ ಅತ್ಯಾಚಾರವೆಸಗಿದ್ದರು’ ಎಂದುಬಾಲಕಿಯ ಕುಟುಂಬದ ಸದಸ್ಯರು ಆರೋಪಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.</p>.<p>‘ಮಗಳನ್ನು ಅತ್ಯಾಚಾರ ಎಸಗಿದ ಆರೋಪಿಗಳು, ಆಕೆಯ ಕೈಕಾಲುಗಳನ್ನು ಕಟ್ಟಿದ್ದರು. ಪೊಲೀಸರು ಆಕೆಯನ್ನು ಮನೆಗೆ ಕರೆತಂದರು. ಆದರೆ, ಪೊಲೀಸರು ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಲಿಲ್ಲ‘ ಎಂದು ಸಂತ್ರಸ್ತೆಯ ತಂದೆ ಆರೋಪಿಸಿದ್ದಾರೆ.</p>.<p>ಸಂತ್ರಸ್ತೆಯ ಕುಟುಂಬ ಸದಸ್ಯರು ನೀಡಿದ ದೂರಿನ ಅನ್ವಯ ಗ್ರಾಮದ ಮುಖಂಡ ಮಗ ಕಿಶನ್ ಉಪಾಧ್ಯಾಯ, ಆಶೀಶ್ ಮತ್ತು ಸತೀಶ್ ಎಂಬುವರ ವಿರುದ್ಧ ಐಪಿಸಿ ಮತ್ತು ಎಸ್.ಸಿ, ಎಸ್.ಟಿ ದೌರ್ಜನ್ಯ ತಡೆ ಕಾಯ್ದೆ ಮತ್ತು ಪೋಕ್ಸೊ ಕಾಯ್ದೆಯಡಿ ಬಂಧಿಸಿರುವುದಾಗಿ ಮಿತ್ತಲ್ ತಿಳಿಸಿದ್ದಾರೆ.</p>.<p>‘ಅತ್ಯಾಚಾರಕ್ಕೊಳಗಾದ ಬಾಲಕಿ ನೀಡಿದ ದೂರನ್ನು ಸ್ವೀಕರಿಸದ ಕಾರಣ, ಆಕೆ ಪ್ರಾಣ ಕಳೆದುಕೊಂಡಿದ್ದಾಳೆ‘ ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ. ಇವರ ಆರೋಪವನ್ನು ಪೊಲೀಸರು ನಿರಾಕರಿಸಿದ್ದು, ಬಾಲಕಿ ಯಾವುದೇ ದೂರನ್ನು ನೀಡಿಲ್ಲ ಎಂದಿದ್ದಾರೆ.</p>.<p>‘ಮಣರೋತ್ತರ ಪರೀಕ್ಷೆಯ ವರದಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರಾಗಿರುವುದು ದೃಢಪಟ್ಟಿಲ್ಲ. ಕೆಲವು ಮಾದರಿಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಪರೀಕ್ಷೆಗಾಗಿ ಕಳುಹಿಸಿದ್ದೇವೆ‘ ಎಂದು ಮಿತ್ತಲ್ ತಿಳಿಸಿದ್ದಾರೆ.</p>.<p>ಗ್ರಾಮದಲ್ಲಿ ಬುಧವಾರ ಬಾಲಕಿಯ ಮೃತದೇಹದ ಅಂತ್ಯಕ್ರಿಯೆ ನಡೆಯಲಿದ್ದು, ಸೂಕ್ತ ಭದ್ರತಾ ವ್ಯವಸ್ಥೆ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>