ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ ಆರು ಪೊಲೀಸ್‌ ಅಧಿಕಾರಿಗಳಿಗೆ ಕೇಂದ್ರ ಗೃಹ ಸಚಿವರ ಪದಕ

Last Updated 12 ಆಗಸ್ಟ್ 2022, 9:46 IST
ಅಕ್ಷರ ಗಾತ್ರ

ನವದೆಹಲಿ: 2022ನೇ ಸಾಲಿನಲ್ಲಿ ಉತ್ತಮ ತನಿಖೆ ನಡೆಸಿದ ಕರ್ನಾಟಕದ ಆರು ಪೊಲೀಸ್‌ ಅಧಿಕಾರಿಗಳು ಸೇರಿದಂತೆ ದೇಶದ 151 ಪೊಲೀಸ್‌ ಅಧಿಕಾರಿಗಳು ಕೇಂದ್ರ ಗೃಹ ಸಚಿವರ ಪದಕಕ್ಕೆ ಆಯ್ಕೆಯಾಗಿದ್ದಾರೆ.

ಕರ್ನಾಟಕದಿಂದಹೆಚ್ಚುವರಿ ಪೊಲೀಸ್‌ ಅಧಿಕಾರಿ ಕೆ.ಲಕ್ಷ್ಮಿ ಗಣೇಶ್‌, ಡಿವೈಎಸ್‌ಪಿ ವೆಂಕಟಪ್ಪ ನಾಯಕ, ಡಿವೈಎಸ್‌ಪಿ ಮೈಸೂರು ರಾಜೇಂದ್ರ ಗೌತಮ್‌, ಡಿವೈಎಸ್‌ಪಿ ಶಂಕರ ಕಾಳಪ್ಪ ಮರಿಹಾಳ್‌, ಡಿವೈಎಸ್‌ಪಿ ಶಂಕರಗೌಡ ವೀರನಗೌಡ ಪಾಟೀಲ, ಇನ್‌ಸ್ಪೆಕ್ಟರ್‌ ಎಚ್‌.ಗುರು ಬಸವರಾಜ್‌ ಅವರು ಪದಕಕ್ಕೆ ಆಯ್ಕೆಯಾದವರು.

ತನಿಖೆಯಲ್ಲಿ ಶ್ರೇಷ್ಠತೆಯನ್ನು ಗುರುತಿಸುವ ಉದ್ದೇಶದಿಂದ 2018ರಲ್ಲಿ ಪೊಲೀಸರಿಗೆ ಪದಕ ನೀಡುವುದನ್ನು ಆರಂಭಿಸಲಾಯಿತು. ಪ್ರತಿ ವರ್ಷ ಆಗಸ್ಟ್‌ 12ರಂದು ಪದಕ ಪುರಸ್ಕೃತರ ಹೆಸರನ್ನು ಪ್ರಕಟಿಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT