<p><strong>ನವದೆಹಲಿ:</strong> ರಿಶಾಂತ್ ಎಂಬ 16 ತಿಂಗಳ ಮಗುವೊಂದು ಅಂಗಾಂಗ ದಾನದ ಮೂಲಕ ಇಬ್ಬರ ಜೀವ ಉಳಿಸಿದೆ!</p>.<p>ಬಿದ್ದು ಮಾರಣಾಂತಿಕ ಗಾಯಗೊಂಡಿದ್ದ ಮಗುವನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಮಗುವಿನ ಮಿದುಳು ನಿಷ್ಕ್ರಿಯಗೊಂಡಿದೆ (ಬ್ರೈನ್ ಡೆಡ್) ಎಂದು ವೈದ್ಯರು ಘೋಷಿಸಿದರು. ಹೀಗಾಗಿ ಆ ಮಗುವಿನ ಅಂಗಾಂಗ ದಾನ ಮಾಡಲಾಗಿದೆ.</p>.<p>ವೈದ್ಯರ ಪ್ರಕಾರ, ಏಮ್ಸ್ನಲ್ಲಿ ಈವರೆಗೆ ಅಂಗಾಂಗ ದಾನ ಮಾಡಿದ ಅತಿ ಕಿರಿಯ ದಾನಿಯಾಗಿದ್ದಾನೆ ರಿಶಾಂತ್.</p>.<p>ಮಗುವಿನ ಕಿಡ್ನಿ, ಲಿವರ್ ಅನ್ನು ಇಬ್ಬರು ಮಕ್ಕಳಿಗೆ ಕಸಿ ಮಾಡಲಾಗಿದೆ. ಹೃದಯ ಕವಾಟಗಳು ಮತ್ತು ಕಾರ್ನಿಯಾಗಳನ್ನು ಸಂರಕ್ಷಿಸಿ ಇಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.</p>.<p><strong>ಘಟನೆ ಹಿನ್ನೆಲೆ:</strong></p>.<p>ದೆಹಲಿಯ ಖಾಸಗಿ ಗುತ್ತಿಗೆದಾರ ಉಪಿಂದರ್ ಎಂಬವರ ಮಗು ರಿಶಾಂತ್ಗೆ ಆಗಸ್ಟ್ 17ರಂದು ಬಿದ್ದು ತಲೆಗೆ ಮಾರಣಾಂತಿಕ ಏಟಾಗಿತ್ತು. ಮಗುವನ್ನು ಜಮುನಾ ಪಾರ್ಕ್ ಪ್ರದೇಶದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಅದೇ ದಿನ ಏಮ್ಸ್ನ ಜಯಪ್ರಕಾಶ್ ನಾರಾಯಣ್ ಟ್ರಾಮಾ ಸೆಂಟರ್ಗೆ ಕಳುಹಿಸಲಾಗಿತ್ತು.</p>.<p><a href="https://www.prajavani.net/district/belagavi/leopard-capture-operation-continues-in-belagavi-966383.html" itemprop="url">ಬೆಳಗಾವಿ: ಆನೆಗಳ ಕಣ್ಣಿಗೆ ಬೀಳದ ಚಿರತೆ ಟ್ರ್ಯಾಪ್ ಕ್ಯಾಮೆರಾದಲ್ಲಿ ಸೆರೆ </a></p>.<p>‘ಆ ಮಗು ದಾನ ಮಾಡುವುದಕ್ಕಾಗಿಯೇ ಹುಟ್ಟಿತ್ತೇನೋ. ಎಂಟು ದಿನಗಳ ಕಾಲ ಜೀವನ್ಮರಣ ಸ್ಥಿತಿಯಲ್ಲಿ ಹೋರಾಡಿದ. ತಲೆಗೆ ವಿಪರೀತ ಏಟಾಗಿತ್ತು. ಇಡೀ ಮಿದುಳಿಗೆ ಸರಿಪಡಿಸಲಾರದಷ್ಟು ಹಾನಿಯಾಗಿರುವುದು ಸಿಟಿ ಸ್ಕ್ಯಾನ್ನಿಂದ ತಿಳಿದುಬಂದಿತ್ತು’ ಎಂದು ಏಮ್ಸ್ನ ನ್ಯೂರೋಸರ್ಜರಿ ವಿಭಾಗದ ಪ್ರಾಧ್ಯಾಪಕ ದೀಪಕ್ ಗುಪ್ತ ತಿಳಿಸಿದ್ದಾರೆ.</p>.<p>ಆಗಸ್ಟ್ 24ರಂದು ಮಗುವಿನ ಮಿದುಳು ನಿಷ್ಕ್ರಿಯಗೊಂಡಿದೆ ಎಂದು ಘೋಷಿಸಲಾಗಿತ್ತು.</p>.<p>ಮಗುವಿನ ಅಗಲುವಿಕೆಯ ದುಃಖದಲ್ಲಿದ್ದ ಕುಟುಂಬದವರಿಗೆ ವೈದ್ಯರು ಮತ್ತು ಅಂಗಾಂಗ ಸಂರಕ್ಷಣಾ ಬ್ಯಾಂಕಿಂಗ್ ಸಂಘಟನೆ (ಆರ್ಗನ್ ರಿಟ್ರೀವಲ್ ಬ್ಯಾಂಕಿಂಗ್ ಆರ್ಗನೈಸೇಷನ್) ಅಂಗಾಗ ದಾನದ ಸಲಹೆ ನೀಡಿತು. ಬಳಿಕ ಕುಟುಂಬದವರು ಒಪ್ಪಿಗೆ ಸೂಚಿಸಿದರು ಎಂದು ವೈದ್ಯರು ತಿಳಿಸಿದ್ದಾರೆ.</p>.<p><a href="https://www.prajavani.net/india-news/sonali-phogat-death-case-autopsy-indicates-multiple-injuries-on-body-murder-charge-pressed-against-966423.html" itemprop="url">ನಟಿ ಸೊನಾಲಿ ಫೋಗಟ್ ದೇಹದಲ್ಲಿ ಗಾಯಗಳು ಪತ್ತೆ: ಸಹಚರರ ವಿರುದ್ಧ ಕೊಲೆ ಪ್ರಕರಣ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಿಶಾಂತ್ ಎಂಬ 16 ತಿಂಗಳ ಮಗುವೊಂದು ಅಂಗಾಂಗ ದಾನದ ಮೂಲಕ ಇಬ್ಬರ ಜೀವ ಉಳಿಸಿದೆ!</p>.<p>ಬಿದ್ದು ಮಾರಣಾಂತಿಕ ಗಾಯಗೊಂಡಿದ್ದ ಮಗುವನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಮಗುವಿನ ಮಿದುಳು ನಿಷ್ಕ್ರಿಯಗೊಂಡಿದೆ (ಬ್ರೈನ್ ಡೆಡ್) ಎಂದು ವೈದ್ಯರು ಘೋಷಿಸಿದರು. ಹೀಗಾಗಿ ಆ ಮಗುವಿನ ಅಂಗಾಂಗ ದಾನ ಮಾಡಲಾಗಿದೆ.</p>.<p>ವೈದ್ಯರ ಪ್ರಕಾರ, ಏಮ್ಸ್ನಲ್ಲಿ ಈವರೆಗೆ ಅಂಗಾಂಗ ದಾನ ಮಾಡಿದ ಅತಿ ಕಿರಿಯ ದಾನಿಯಾಗಿದ್ದಾನೆ ರಿಶಾಂತ್.</p>.<p>ಮಗುವಿನ ಕಿಡ್ನಿ, ಲಿವರ್ ಅನ್ನು ಇಬ್ಬರು ಮಕ್ಕಳಿಗೆ ಕಸಿ ಮಾಡಲಾಗಿದೆ. ಹೃದಯ ಕವಾಟಗಳು ಮತ್ತು ಕಾರ್ನಿಯಾಗಳನ್ನು ಸಂರಕ್ಷಿಸಿ ಇಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.</p>.<p><strong>ಘಟನೆ ಹಿನ್ನೆಲೆ:</strong></p>.<p>ದೆಹಲಿಯ ಖಾಸಗಿ ಗುತ್ತಿಗೆದಾರ ಉಪಿಂದರ್ ಎಂಬವರ ಮಗು ರಿಶಾಂತ್ಗೆ ಆಗಸ್ಟ್ 17ರಂದು ಬಿದ್ದು ತಲೆಗೆ ಮಾರಣಾಂತಿಕ ಏಟಾಗಿತ್ತು. ಮಗುವನ್ನು ಜಮುನಾ ಪಾರ್ಕ್ ಪ್ರದೇಶದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಅದೇ ದಿನ ಏಮ್ಸ್ನ ಜಯಪ್ರಕಾಶ್ ನಾರಾಯಣ್ ಟ್ರಾಮಾ ಸೆಂಟರ್ಗೆ ಕಳುಹಿಸಲಾಗಿತ್ತು.</p>.<p><a href="https://www.prajavani.net/district/belagavi/leopard-capture-operation-continues-in-belagavi-966383.html" itemprop="url">ಬೆಳಗಾವಿ: ಆನೆಗಳ ಕಣ್ಣಿಗೆ ಬೀಳದ ಚಿರತೆ ಟ್ರ್ಯಾಪ್ ಕ್ಯಾಮೆರಾದಲ್ಲಿ ಸೆರೆ </a></p>.<p>‘ಆ ಮಗು ದಾನ ಮಾಡುವುದಕ್ಕಾಗಿಯೇ ಹುಟ್ಟಿತ್ತೇನೋ. ಎಂಟು ದಿನಗಳ ಕಾಲ ಜೀವನ್ಮರಣ ಸ್ಥಿತಿಯಲ್ಲಿ ಹೋರಾಡಿದ. ತಲೆಗೆ ವಿಪರೀತ ಏಟಾಗಿತ್ತು. ಇಡೀ ಮಿದುಳಿಗೆ ಸರಿಪಡಿಸಲಾರದಷ್ಟು ಹಾನಿಯಾಗಿರುವುದು ಸಿಟಿ ಸ್ಕ್ಯಾನ್ನಿಂದ ತಿಳಿದುಬಂದಿತ್ತು’ ಎಂದು ಏಮ್ಸ್ನ ನ್ಯೂರೋಸರ್ಜರಿ ವಿಭಾಗದ ಪ್ರಾಧ್ಯಾಪಕ ದೀಪಕ್ ಗುಪ್ತ ತಿಳಿಸಿದ್ದಾರೆ.</p>.<p>ಆಗಸ್ಟ್ 24ರಂದು ಮಗುವಿನ ಮಿದುಳು ನಿಷ್ಕ್ರಿಯಗೊಂಡಿದೆ ಎಂದು ಘೋಷಿಸಲಾಗಿತ್ತು.</p>.<p>ಮಗುವಿನ ಅಗಲುವಿಕೆಯ ದುಃಖದಲ್ಲಿದ್ದ ಕುಟುಂಬದವರಿಗೆ ವೈದ್ಯರು ಮತ್ತು ಅಂಗಾಂಗ ಸಂರಕ್ಷಣಾ ಬ್ಯಾಂಕಿಂಗ್ ಸಂಘಟನೆ (ಆರ್ಗನ್ ರಿಟ್ರೀವಲ್ ಬ್ಯಾಂಕಿಂಗ್ ಆರ್ಗನೈಸೇಷನ್) ಅಂಗಾಗ ದಾನದ ಸಲಹೆ ನೀಡಿತು. ಬಳಿಕ ಕುಟುಂಬದವರು ಒಪ್ಪಿಗೆ ಸೂಚಿಸಿದರು ಎಂದು ವೈದ್ಯರು ತಿಳಿಸಿದ್ದಾರೆ.</p>.<p><a href="https://www.prajavani.net/india-news/sonali-phogat-death-case-autopsy-indicates-multiple-injuries-on-body-murder-charge-pressed-against-966423.html" itemprop="url">ನಟಿ ಸೊನಾಲಿ ಫೋಗಟ್ ದೇಹದಲ್ಲಿ ಗಾಯಗಳು ಪತ್ತೆ: ಸಹಚರರ ವಿರುದ್ಧ ಕೊಲೆ ಪ್ರಕರಣ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>