<p>ನವದೆಹಲಿ: ಮೊಬೈಲ್ ಫೋನ್ ಕದ್ದಿದ್ದಕ್ಕೆ ಕಾರ್ಖಾನೆಯ ಕಾರ್ಮಿಕರ ಗುಂಪೊಂದು 19 ವರ್ಷದ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಿಂದ ವರದಿಯಾಗಿದೆ.</p>.<p>ತೀವ್ರ ಗಾಯಗೊಂಡಿದ್ದ ಯುವಕ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಉತ್ತರ ದೆಹಲಿಯ ಸರಾಯ್ ರೋಹಿಲ್ಲಾದಲ್ಲಿ ಶನಿವಾರ ಘಟನೆ ನಡೆದಿದ್ದು, ಮೃತ ವ್ಯಕ್ತಿಯನ್ನು ಇಜಾರ್ ಎಂದು ಗುರುತಿಸಲಾಗಿದೆ.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಜ್ಞಾನಿ (36) ಎಂಬಾತನನ್ನು ಬಂಧಿಸಲಾಗಿದೆ.</p>.<p>ಇದನ್ನೂ ಓದಿ:<a href="https://www.prajavani.net/india-news/dalit-girl-gang-raped-set-afire-in-uttar-pradesh-971199.html" itemprop="url">ಉತ್ತರ ಪ್ರದೇಶ: ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಬೆಂಕಿ ಹಚ್ಚಿ ಕೊಲೆ ಯತ್ನ </a></p>.<p>ಶನಿವಾರ ಮುಂಜಾನೆ 4 ಗಂಟೆಗೆ ಕಾರ್ಖಾನೆಗೆ ನುಗ್ಗಿದ್ದ ಇಜಾರ್ ಮೊಬೈಲ್ ಫೋನ್ ಕಳವಿಗೆ ಯತ್ನಿಸಿದ್ದು, ಈ ವೇಳೆ ಸಿಕ್ಕಿ ಬಿದ್ದಿದ್ದಾನೆ. ಈ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ಉಪ ಪೊಲೀಸ್ ಆಯುಕ್ತ (ಉತ್ತರ) ಸಾಗರ್ ಸಿಂಗ್ ಕಳ್ಸಿ ತಿಳಿಸಿದ್ದಾರೆ.</p>.<p>ಬಳಿಕ ಇಜಾರ್ ಅವರನ್ನು ಕಾರ್ಖಾನೆಯ ಹೊರಗಡೆ ಎಳೆದೊಯ್ದ ಆರೋಪಿ ಜ್ಞಾನಿ ಹಾಗೂ ಇತರರು, ಆತನ ಮೇಲೆ ಪ್ಲಾಸ್ಟಿಕ್ ಪೈಪ್, ಬೆಲ್ಟ್ಗಳಿಂದ ನಿರ್ದಯವಾಗಿ ಹಲ್ಲೆ ನಡೆಸಿದ್ದಾರೆ. ಇಜಾರ್ ಕೂದಲನ್ನು ಕತ್ತರಿಸುವ ಮೂಲಕ ಚಿತ್ರ ಹಿಂಸೆ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: ಮೊಬೈಲ್ ಫೋನ್ ಕದ್ದಿದ್ದಕ್ಕೆ ಕಾರ್ಖಾನೆಯ ಕಾರ್ಮಿಕರ ಗುಂಪೊಂದು 19 ವರ್ಷದ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಿಂದ ವರದಿಯಾಗಿದೆ.</p>.<p>ತೀವ್ರ ಗಾಯಗೊಂಡಿದ್ದ ಯುವಕ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಉತ್ತರ ದೆಹಲಿಯ ಸರಾಯ್ ರೋಹಿಲ್ಲಾದಲ್ಲಿ ಶನಿವಾರ ಘಟನೆ ನಡೆದಿದ್ದು, ಮೃತ ವ್ಯಕ್ತಿಯನ್ನು ಇಜಾರ್ ಎಂದು ಗುರುತಿಸಲಾಗಿದೆ.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಜ್ಞಾನಿ (36) ಎಂಬಾತನನ್ನು ಬಂಧಿಸಲಾಗಿದೆ.</p>.<p>ಇದನ್ನೂ ಓದಿ:<a href="https://www.prajavani.net/india-news/dalit-girl-gang-raped-set-afire-in-uttar-pradesh-971199.html" itemprop="url">ಉತ್ತರ ಪ್ರದೇಶ: ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಬೆಂಕಿ ಹಚ್ಚಿ ಕೊಲೆ ಯತ್ನ </a></p>.<p>ಶನಿವಾರ ಮುಂಜಾನೆ 4 ಗಂಟೆಗೆ ಕಾರ್ಖಾನೆಗೆ ನುಗ್ಗಿದ್ದ ಇಜಾರ್ ಮೊಬೈಲ್ ಫೋನ್ ಕಳವಿಗೆ ಯತ್ನಿಸಿದ್ದು, ಈ ವೇಳೆ ಸಿಕ್ಕಿ ಬಿದ್ದಿದ್ದಾನೆ. ಈ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ಉಪ ಪೊಲೀಸ್ ಆಯುಕ್ತ (ಉತ್ತರ) ಸಾಗರ್ ಸಿಂಗ್ ಕಳ್ಸಿ ತಿಳಿಸಿದ್ದಾರೆ.</p>.<p>ಬಳಿಕ ಇಜಾರ್ ಅವರನ್ನು ಕಾರ್ಖಾನೆಯ ಹೊರಗಡೆ ಎಳೆದೊಯ್ದ ಆರೋಪಿ ಜ್ಞಾನಿ ಹಾಗೂ ಇತರರು, ಆತನ ಮೇಲೆ ಪ್ಲಾಸ್ಟಿಕ್ ಪೈಪ್, ಬೆಲ್ಟ್ಗಳಿಂದ ನಿರ್ದಯವಾಗಿ ಹಲ್ಲೆ ನಡೆಸಿದ್ದಾರೆ. ಇಜಾರ್ ಕೂದಲನ್ನು ಕತ್ತರಿಸುವ ಮೂಲಕ ಚಿತ್ರ ಹಿಂಸೆ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>