<p><strong>ಭೋಪಾಲ್</strong>: ಮಧ್ಯಪ್ರದೇಶದ ಗ್ವಾಲಿಯರ್-ಚಂಬಲ್ ಕಣಿವೆ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವು ಸೇತುವೆಗಳು ಕೊಚ್ಚಿ ಹೋಗಿವೆ. ಮಳೆಯಿಂದಾಗಿ ಇಬ್ಬರು ಮೃತಪಟ್ಟಿದ್ದಾರೆ. ಕಳೆದ 70 ವರ್ಷಗಳಲ್ಲಿ ರಾಜ್ಯ ಎಂದೂ ಇಂತಹ ಮಳೆಹಾನಿ ಕಂಡಿಲ್ಲ‘ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದರು.</p>.<p>ಭಾರಿ ಮಳೆಯಿಂದಾಗಿ ರತಂಗರ್ ಮಾತಾ ದೇವಸ್ಥಾನ ಮತ್ತು ಸಂಕುವಾ ಬಳಿಯ ಸೇತುವೆಗಳು ಹಾನಿಗೊಳಗಾಗಿವೆ. ಹೀಗಾಗಿ ಅನೇಕ ಜನರು ಅಲ್ಲಿಯೇ ಸಿಲುಕಿಕೊಂಡಿದ್ದಾರೆ ಎಂದು ಚೌಹಾಣ್ ಹೇಳಿದರು.</p>.<p>ಪ್ರವಾಹ ಪೀಡಿತ ಪ್ರದೇಶಗಳಾದ ಭಿಂಡಿ ಜಿಲ್ಲೆ ಮತ್ತು ಶಿವಪುರಿ ಜಿಲ್ಲೆಯ ಕರೇರಾರ ಪ್ರದೇಶಗಳಿಂದ ಜನರನ್ನು ರಕ್ಷಿಸಲು ವೈಮಾನಿಕ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ತಿಳಿಸಿದರು.</p>.<p>ಮಳೆ ಸಂಬಂಧಿತ ಅನಾಹುತಗಳಿಂದಾಗಿ ಶಿವಪುರಿ ಮತ್ತು ಶಿಯೊಪುರ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಏಳು ಮಂದಿ ಗಾಯಗೊಂಡಿದ್ದಾರೆ ಎಂದು ರಾಜ್ಯ ಕಂದಾಯ ಇಲಾಖೆ ಕಾರ್ಯದರ್ಶಿ ಜ್ಞಾನೇಶ್ವರ್ ಪಿ ಪಾಟೀಲ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.</p>.<p>ಚೌಹಾಣ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಮಳೆ ಅನಾಹುತದ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರವಾಹ ಪರಿಸ್ಥಿತಿ ಎದುರಿಸಲು ಬೇಕಾದ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಇಬ್ಬರೂ ನಾಯಕರು ಭರವಸೆ ನೀಡಿದ್ದಾಗಿ ಚೌಹಾಣ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್</strong>: ಮಧ್ಯಪ್ರದೇಶದ ಗ್ವಾಲಿಯರ್-ಚಂಬಲ್ ಕಣಿವೆ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವು ಸೇತುವೆಗಳು ಕೊಚ್ಚಿ ಹೋಗಿವೆ. ಮಳೆಯಿಂದಾಗಿ ಇಬ್ಬರು ಮೃತಪಟ್ಟಿದ್ದಾರೆ. ಕಳೆದ 70 ವರ್ಷಗಳಲ್ಲಿ ರಾಜ್ಯ ಎಂದೂ ಇಂತಹ ಮಳೆಹಾನಿ ಕಂಡಿಲ್ಲ‘ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದರು.</p>.<p>ಭಾರಿ ಮಳೆಯಿಂದಾಗಿ ರತಂಗರ್ ಮಾತಾ ದೇವಸ್ಥಾನ ಮತ್ತು ಸಂಕುವಾ ಬಳಿಯ ಸೇತುವೆಗಳು ಹಾನಿಗೊಳಗಾಗಿವೆ. ಹೀಗಾಗಿ ಅನೇಕ ಜನರು ಅಲ್ಲಿಯೇ ಸಿಲುಕಿಕೊಂಡಿದ್ದಾರೆ ಎಂದು ಚೌಹಾಣ್ ಹೇಳಿದರು.</p>.<p>ಪ್ರವಾಹ ಪೀಡಿತ ಪ್ರದೇಶಗಳಾದ ಭಿಂಡಿ ಜಿಲ್ಲೆ ಮತ್ತು ಶಿವಪುರಿ ಜಿಲ್ಲೆಯ ಕರೇರಾರ ಪ್ರದೇಶಗಳಿಂದ ಜನರನ್ನು ರಕ್ಷಿಸಲು ವೈಮಾನಿಕ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ತಿಳಿಸಿದರು.</p>.<p>ಮಳೆ ಸಂಬಂಧಿತ ಅನಾಹುತಗಳಿಂದಾಗಿ ಶಿವಪುರಿ ಮತ್ತು ಶಿಯೊಪುರ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಏಳು ಮಂದಿ ಗಾಯಗೊಂಡಿದ್ದಾರೆ ಎಂದು ರಾಜ್ಯ ಕಂದಾಯ ಇಲಾಖೆ ಕಾರ್ಯದರ್ಶಿ ಜ್ಞಾನೇಶ್ವರ್ ಪಿ ಪಾಟೀಲ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.</p>.<p>ಚೌಹಾಣ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಮಳೆ ಅನಾಹುತದ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರವಾಹ ಪರಿಸ್ಥಿತಿ ಎದುರಿಸಲು ಬೇಕಾದ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಇಬ್ಬರೂ ನಾಯಕರು ಭರವಸೆ ನೀಡಿದ್ದಾಗಿ ಚೌಹಾಣ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>