ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಟಾಕಿ ಅಂಗಡಿಗಳಲ್ಲಿ ಬೆಂಕಿ ಅವಘಡ– ಇಬ್ಬರ ಸಾವು

Last Updated 23 ಅಕ್ಟೋಬರ್ 2022, 10:53 IST
ಅಕ್ಷರ ಗಾತ್ರ

ಅಮರಾವತಿ, ಆಂಧ್ರಪ್ರದೇಶ (ಪಿಟಿಐ): ‘ಭಾನುವಾರ ಬೆಳಿಗ್ಗೆ ವಿಜಯವಾಡದ ಮೂರು ಪಟಾಕಿ ಅಂಗಡಿಗಳಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಬೆಂಕಿ ಅನಾಹುತ ಸಂಭವಿಸಿದ ಮೂರು ಅಂಗಡಿಗಳ ಪೈಕಿ ಒಂದು ಅಂಗಡಿಯಲ್ಲಿ ಕೆಲಸಗಾರರು ಮಲಗಿದ್ದರು’ ಎಂದೂ ಅವರು ಹೇಳಿದರು.

‘ಮೂರೂ ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಹೋಗಿವೆ. ಘಟನೆ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ’ ಎಂದರು.

ಬೆಂಕಿ ಅವಘಡಕ್ಕೆ ಕಾರಣವೇನು ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT