ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಕೃಷಿಗೆ ಸಂಬಂಧಿಸಿದ ಮೂರು ಮಸೂದೆಗಳಿಗೆ ಸಂಸತ್ತಿನ ಒಳ–ಹೊರಗೆ ವಿರೋಧ ವ್ಯಕ್ತವಾಗಿದೆ. ಮುಖ್ಯವಾಗಿ ಪಂಜಾಬ್, ಹರಿಯಾಣ, ಪಶ್ಚಿಮ ಬಂಗಾಳ, ಕರ್ನಾಟಕದಲ್ಲಿ ರೈತರ ಹೋರಾಟಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಮಸೂದೆಗಳನ್ನು ವಿರೋಧಿಸಿ ಶುಕ್ರವಾರ ಬಂದ್ ಆಚರಣೆಯನ್ನೂ ಮಾಡಲಾಗುತ್ತಿದೆ. ಇದಕ್ಕೆ ಕಾಂಗ್ರೆಸ್ ಸೇರಿದಂತೆ ಹಲವು ವಿರೋಧ ಪಕ್ಷಗಳೂ ಬೆಂಬಲ ನೀಡಿವೆ.