‘ರಶೀದ್ ಹಾಗೂ ಆತನ ಸಹೋದರ ಸಲೀಂ ಅವರು ತನ್ನನ್ನು ಮತಾಂತರಗೊಳ್ಳುವಂತೆ ಬಲವಂತಪಡಿಸಿಲ್ಲ ಎಂದು ಪಿಂಕಿ ಹೇಳಿಕೆ ನೀಡಿದ್ದಾರೆ. ಸಹೋದರರಿಬ್ಬರ ಮೇಲಿನ ಆರೋಪ ಸಾಬೀತುಪಡಿಸಲು ನಮ್ಮ ಬಳಿ ಯಾವುದೇ ಸಾಕ್ಷಗಳಿಲ್ಲ ಎಂದು ಕಾಂತ್ ಪೊಲೀಸ್ ಠಾಣೆಯ ಅಧಿಕಾರಿಗಳು ನ್ಯಾಯಾಲಯಕ್ಕೆ ಶುಕ್ರವಾರ ತಿಳಿಸಿದ್ದರು. ಇದರ ಆಧಾರದಲ್ಲಿ ಚೀಫ್ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಇಬ್ಬರನ್ನು ಬಿಡುಗಡೆಗೊಳಿಸಲು ಆದೇಶಿಸಿದೆ’ ಎಂದು ಪ್ರಾಸಿಕ್ಯೂಟ್ ಅಧಿಕಾರಿ ಅಮರ್ ತಿವಾರಿ ತಿಳಿಸಿದ್ದಾರೆ.