ಮಂಡ್ಲಾ ಮತ್ತು ಬಾಲಘಾಟ್ ಜಿಲ್ಲೆಯ ಭದ್ರತಾ ಪಡೆಗಳು ಮತ್ತು ಪೊಲೀಸರು ಬುಧವಾರ ನಕ್ಸಲರ ವಿರುದ್ಧ ಜಂಟಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ. ಬಾಲಘಾಟ್ ಜಿಲ್ಲೆಯ ಗರ್ಹಿ ಪ್ರದೇಶ ಮತ್ತು ಮಂಡ್ಲಾ ಜಿಲ್ಲೆಯ ಮೋತಿನಾಳದ ಸುಪ್ಖಾರ್ ಪ್ರದೇಶದಲ್ಲಿ ಎನ್ಕೌಂಟರ್ ನಡೆಸಲಾಗಿದೆ ಎಂದು ಮಂಡ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ), ಗಜೇಂದ್ರ ಸಿಂಗ್ ತಿಳಿಸಿದ್ದಾರೆ.