<p><strong>ಕಾನ್ಪುರ (ಉತ್ತರ ಪ್ರದೇಶ):</strong> ಭಾನುವಾರ ಮುಂಜಾನೆ ಇಲ್ಲಿನ ಹರಾಮೌ ಗ್ರಾಮದ ಗುಡಿಸಲೊಂದು ಬೆಂಕಿಗಾಹುತಿಯಾಗಿದ್ದು, ದಂಪತಿ ಮತ್ತು ಅವರ ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ 5 ಜನ ದುರ್ಘಟನೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಓರ್ವ ಮಹಿಳೆಗೂ ಗಂಭೀರ ಸುಟ್ಟ ಗಾಯಗಳಾಗಿವೆ.</p>.<p>ಕುಟುಂಬದವರು ಮಲಗಿದ್ದಾಗ ವಿದ್ಯುತ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.</p>.<p>ಮೃತರನ್ನು ಕೂಲಿ ಕಾರ್ಮಿಕ ಸತೀಶ್ (27), ಅವರ ಪತ್ನಿ ಕಾಜಲ್ (24), ಅವರ ಮಕ್ಕಳಾದ ಸನ್ನಿ (7), ಸಂದೀಪ್ (4) ಮತ್ತು ಮಗಳು ಗುಡಿಯಾ (2) ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಕಾನ್ಪುರ್ ದೇಹತ್) ಬಿಬಿಜಿಟಿಎಸ್ ಮೂರ್ತಿ ತಿಳಿಸಿದ್ದಾರೆ.</p>.<p>ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.</p>.<p>ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾನ್ಪುರ (ಉತ್ತರ ಪ್ರದೇಶ):</strong> ಭಾನುವಾರ ಮುಂಜಾನೆ ಇಲ್ಲಿನ ಹರಾಮೌ ಗ್ರಾಮದ ಗುಡಿಸಲೊಂದು ಬೆಂಕಿಗಾಹುತಿಯಾಗಿದ್ದು, ದಂಪತಿ ಮತ್ತು ಅವರ ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ 5 ಜನ ದುರ್ಘಟನೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಓರ್ವ ಮಹಿಳೆಗೂ ಗಂಭೀರ ಸುಟ್ಟ ಗಾಯಗಳಾಗಿವೆ.</p>.<p>ಕುಟುಂಬದವರು ಮಲಗಿದ್ದಾಗ ವಿದ್ಯುತ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.</p>.<p>ಮೃತರನ್ನು ಕೂಲಿ ಕಾರ್ಮಿಕ ಸತೀಶ್ (27), ಅವರ ಪತ್ನಿ ಕಾಜಲ್ (24), ಅವರ ಮಕ್ಕಳಾದ ಸನ್ನಿ (7), ಸಂದೀಪ್ (4) ಮತ್ತು ಮಗಳು ಗುಡಿಯಾ (2) ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಕಾನ್ಪುರ್ ದೇಹತ್) ಬಿಬಿಜಿಟಿಎಸ್ ಮೂರ್ತಿ ತಿಳಿಸಿದ್ದಾರೆ.</p>.<p>ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.</p>.<p>ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>