ನವದಹೆಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 2001ರ ಸಂಸತ್ ದಾಳಿಯ ಹುತಾತ್ಮರಿಗೆ ಗೌರವ ನಮನ ಸಲ್ಲಿಸಿದ್ದಾರೆ.
ಸಂಸತ್ ಭವನದ ಮೇಲೆ ದಾಳಿ ನಡೆದು ಇಂದಿಗೆ 20 ವರ್ಷಗಳು ಕಳೆದಿವೆ. ಉಗ್ರರ ದಾಳಿಯಲ್ಲಿ ಭದ್ರತಾ ಸಿಬ್ಬಂದಿ ಸೇರಿದಂತೆ ಒಂಬತ್ತು ಮಂದಿ ಮೃತಪಟ್ಟಿದ್ದರು.
ಈ ಕುರಿತು ಟ್ವೀಟ್ ಮಾಡಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್, '2001ರಲ್ಲಿ ಭೀಕರ ಭಯೋತ್ಪಾದನೆ ದಾಳಿಯಿಂದ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ಸಂಸತ್ತನ್ನು ರಕ್ಷಿಸಲು ತಮ್ಮ ಪ್ರಾಣವನ್ನೇ ಅರ್ಪಿಸಿರುವ ಧೀರ ಭದ್ರತಾ ಸಿಬ್ಬಂದಿಗೆ ನನ್ನ ಗೌರವ ನಮನ ಸಲ್ಲಿಸುತ್ತೇನೆ. ಅವರ ಬಲಿದಾನಕ್ಕಾಗಿ ದೇಶವು ಸದಾ ಕೃತಜ್ಞವಾಗಿರುತ್ತದೆ' ಎಂದು ಹೇಳಿದ್ದಾರೆ.
I pay homage to the brave security personnel who laid down their lives on this day in 2001, defending the Parliament of the world’s largest democracy against a dastardly terrorist attack. The nation shall forever remain grateful to them for their supreme sacrifice.
— President of India (@rashtrapatibhvn) December 13, 2021
ಪ್ರಧಾನಿ ನರೇಂದ್ರ ಮೋದಿ ಕೂಡ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. '2001ರಲ್ಲಿ ಸಂಸತ್ ದಾಳಿಯ ಸಂದರ್ಭದಲ್ಲಿ ಕರ್ತವ್ಯದ ವೇಳೆ ಹುತಾತ್ಮರಾದ ಎಲ್ಲ ಭದ್ರತಾ ಸಿಬ್ಬಂದಿಗೆ ನನ್ನ ನಮನ ಸಲ್ಲಿಸುತ್ತೇನೆ. ಅವರ ಸೇವೆ ಮತ್ತು ಪರಮ ತ್ಯಾಗ ದೇಶದ ಪ್ರತಿಯೊಬ್ಬ ನಾಗರಿಕರಿಗೂ ಪ್ರೇರಣೆ ನೀಡುತ್ತಲೇ ಇದೆ ' ಎಂದು ಹೇಳಿದ್ದಾರೆ.
I pay my tributes to all those security personnel who were martyred in the line of duty during the Parliament attack in 2001. Their service to the nation and supreme sacrifice continues to inspire every citizen.
— Narendra Modi (@narendramodi) December 13, 2021
ಗೃಹ ಸಚಿವ ಅಮಿತ್ ಶಾ ಕೂಡಾ ಭದ್ರತಾ ಸಿಬ್ಬಂದಿಯ ಅಪ್ರತಿಮ ಶೌರ್ಯ ಮತ್ತು ಅಮರ ತ್ಯಾಗ ಯಾವಾಗಲೂ ರಾಷ್ಟ್ರದ ಸೇವೆ ಮಾಡಲು ನಮಗೆ ಸ್ಫೂರ್ತಿ ತುಂಬಲಿದೆ ಎಂದು ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಶಾ, 'ಭಾರತದ ಪ್ರಜಾಪ್ರಭುತ್ವ ದೇಗುಲವಾದ ಸಂಸತ್ ಭವನದ ಮೇಲಿನ ಹೇಡಿತನದ ಭಯೋತ್ಪಾದಕ ದಾಳಿಯಲ್ಲಿ ರಾಷ್ಟ್ರದ ಹೆಮ್ಮೆಯನ್ನು ರಕ್ಷಿಸಲು ಎಲ್ಲವನ್ನು ಬಲಿದಾನ ಮಾಡಿದ ಧೀರ ಭದ್ರತಾ ಪಡೆಗಳ ಧೈರ್ಯ ಹಾಗೂ ಶೌರ್ಯಕ್ಕೆ ನನ್ನ ನಮನಗಳು' ಎಂದು ಹೇಳಿದ್ದಾರೆ.
भारतीय लोकतंत्र के मंदिर संसद भवन पर हुए कायरतापूर्ण आतंकी हमले में राष्ट्र के गौरव की रक्षा हेतु अपना सर्वोच्च बलिदान देने वाले सभी बहादुर सुरक्षाबलों के साहस व शौर्य को कोटिशः नमन करता हूँ।
— Amit Shah (@AmitShah) December 13, 2021
आपका अद्वितीय पराक्रम व अमर बलिदान सदैव हमें राष्ट्रसेवा हेतु प्रेरित करता रहेगा। pic.twitter.com/HyzCyPkxnF
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.