ಖಚಿತ ಮಾಹಿತಿ ಮೇರೆಗೆ ಭಾನುವಾರ ರಾತ್ರಿ ಕಾರ್ಯಾಚರಣೆ ನಡೆಸಿದ ಗೋಧ್ರಾ ಪೊಲೀಸರ ತಂಡ, ರೈಲ್ವೆ ನಿಲ್ದಾಣ ಬಳಿಯ ಸಿಗ್ನಲ್ ಫಾಲಿಯಾ ಪ್ರದೇಶದಲ್ಲಿ ಮನೆಯೊಂದರಲ್ಲಿದ್ದ ಭಾತುಕ್ನನ್ನು ಬಂಧಿಸಿತು. ಈತ ರೈಲು ಬೋಗಿಗಳಿಗೆ ಬೆಂಕಿ ಹಚ್ಚಲು ಪೆಟ್ರೋಲ್ ವ್ಯವಸ್ಥೆ ಮಾಡಿದ್ದ ಮತ್ತು ಗಲಭೆಗೂ ಪ್ರಚೋದನೆ ನೀಡಿದ್ದ. ತನಿಖೆ ಸಂದರ್ಭದಲ್ಲಿ ಈತನ ಹೆಸರು ಕಾಣಿಸಿಕೊಂಡ ತಕ್ಷಣ ದೆಹಲಿಗೆ ಪರಾರಿಯಾಗಿದ್ದ. ಈತನ ವಿರುದ್ಧ ಕೊಲೆ ಮತ್ತು ಗಲಭೆ ಸೃಷ್ಟಿಸಿದ ಆರೋಪಗಳನ್ನು ಹೊರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.