<p class="title"><strong>ನವದೆಹಲಿ (ಪಿಟಿಐ)</strong>: ‘ಗುಜರಾತ್ ರಾಜ್ಯಕ್ಕೆ ಕೆಟ್ಟ ಹೆಸರು ತರಲು, ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ಎರಡು ದಶಕಗಳ ಕಾಲ ದೊಡ್ಡ ಪ್ರಮಾಣದಲ್ಲಿ ಸಂಚು ನಡೆಸಿದ್ದಾರೆ’ ಎಂದು ಗುಜರಾತ್ ಸರ್ಕಾರ ತಿಳಿಸಿದೆ.</p>.<p class="title">2002ರ ಗಲಭೆಗೆ ಸಂಬಂಧಿಸಿ ಝಾಕಿಯಾ ಜಾಫ್ರಿ ಅವರ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ಗೆ, ಗುಜರಾತ್ ಸರ್ಕಾರವನ್ನು ಪ್ರತಿನಿಧಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದರು.</p>.<p class="title">‘ಝಾಕಿಯಾ ಅವರ ಬಗ್ಗೆ ಹೇಳುವಂತದ್ದೇನೂ ಇಲ್ಲ.ಅವರು ಆಪ್ತರನ್ನು ಕಳೆದುಕೊಂಡಿದ್ದಾರೆ. ಆದರೆ, ಒಬ್ಬ ವಿಧವೆಯ ಸಂಕಷ್ಟಗಳನ್ನು ಆಧರಿಸಿ ಶೋಷಣೆ ಮಾಡುವುದಕ್ಕೂ ಒಂದು ಮಿತಿ ಇದೆ’ ಎಂದು ಮೆಹ್ತಾ ವಾದಿಸಿದರು.</p>.<p class="title">ಅಹಮದಾಬಾದ್ನ ಗುಲ್ಬರ್ಗ್ ಸೊಸೈಟಿಯಲ್ಲಿ ಫೆ.28, 2002ರಲ್ಲಿ ಹತ್ಯೆಯಾಗಿದ್ದ ಕಾಂಗ್ರೆಸ್ ನಾಯಕ ಎಶಾನ್ ಜಾಫ್ರಿ ಅವರ ಪತ್ನಿ ಝಾಕಿಯಾ. ಗಲಭೆ ಪ್ರಕರಣದಲ್ಲಿ ಆಗ ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಸೇರಿದಂತೆ 64 ಜನರನ್ನು ಆರೋಪಮುಕ್ತಗೊಳಿಸಿದ್ದ ಎಸ್ಐಟಿ ಕ್ರಮವನ್ನು ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ್ದರು.</p>.<p>ಮಾನವಹಕ್ಕುಗಳ ಹೋರಾಟಗಾರ್ತಿ ತೀಸ್ತಾಸೆಟಲ್ವಾಡ್ ಎರಡನೇ ಅರ್ಜಿದಾರರಾಗಿದ್ದರು. ವಿಚಾರಣೆಯಲ್ಲಿ ಎಸ್ಐಟಿ ಪ್ರತಿನಿಧಿಸಿದ್ದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರು, ‘ಪ್ರಕರಣ ಇನ್ನೂ ಬಿಸಿಯಾಗಿರುವಂತೆ ನೋಡಿಕೊಳ್ಳುವ ಅವರ ಉದ್ದೇಶ, ಕಾರಣ, ಪ್ರೇರಣೆ ಏನು? ಇದರ ಹಿಂದೆ ದೊಡ್ಡ ಸಂಚಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ (ಪಿಟಿಐ)</strong>: ‘ಗುಜರಾತ್ ರಾಜ್ಯಕ್ಕೆ ಕೆಟ್ಟ ಹೆಸರು ತರಲು, ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ಎರಡು ದಶಕಗಳ ಕಾಲ ದೊಡ್ಡ ಪ್ರಮಾಣದಲ್ಲಿ ಸಂಚು ನಡೆಸಿದ್ದಾರೆ’ ಎಂದು ಗುಜರಾತ್ ಸರ್ಕಾರ ತಿಳಿಸಿದೆ.</p>.<p class="title">2002ರ ಗಲಭೆಗೆ ಸಂಬಂಧಿಸಿ ಝಾಕಿಯಾ ಜಾಫ್ರಿ ಅವರ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ಗೆ, ಗುಜರಾತ್ ಸರ್ಕಾರವನ್ನು ಪ್ರತಿನಿಧಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದರು.</p>.<p class="title">‘ಝಾಕಿಯಾ ಅವರ ಬಗ್ಗೆ ಹೇಳುವಂತದ್ದೇನೂ ಇಲ್ಲ.ಅವರು ಆಪ್ತರನ್ನು ಕಳೆದುಕೊಂಡಿದ್ದಾರೆ. ಆದರೆ, ಒಬ್ಬ ವಿಧವೆಯ ಸಂಕಷ್ಟಗಳನ್ನು ಆಧರಿಸಿ ಶೋಷಣೆ ಮಾಡುವುದಕ್ಕೂ ಒಂದು ಮಿತಿ ಇದೆ’ ಎಂದು ಮೆಹ್ತಾ ವಾದಿಸಿದರು.</p>.<p class="title">ಅಹಮದಾಬಾದ್ನ ಗುಲ್ಬರ್ಗ್ ಸೊಸೈಟಿಯಲ್ಲಿ ಫೆ.28, 2002ರಲ್ಲಿ ಹತ್ಯೆಯಾಗಿದ್ದ ಕಾಂಗ್ರೆಸ್ ನಾಯಕ ಎಶಾನ್ ಜಾಫ್ರಿ ಅವರ ಪತ್ನಿ ಝಾಕಿಯಾ. ಗಲಭೆ ಪ್ರಕರಣದಲ್ಲಿ ಆಗ ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಸೇರಿದಂತೆ 64 ಜನರನ್ನು ಆರೋಪಮುಕ್ತಗೊಳಿಸಿದ್ದ ಎಸ್ಐಟಿ ಕ್ರಮವನ್ನು ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ್ದರು.</p>.<p>ಮಾನವಹಕ್ಕುಗಳ ಹೋರಾಟಗಾರ್ತಿ ತೀಸ್ತಾಸೆಟಲ್ವಾಡ್ ಎರಡನೇ ಅರ್ಜಿದಾರರಾಗಿದ್ದರು. ವಿಚಾರಣೆಯಲ್ಲಿ ಎಸ್ಐಟಿ ಪ್ರತಿನಿಧಿಸಿದ್ದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರು, ‘ಪ್ರಕರಣ ಇನ್ನೂ ಬಿಸಿಯಾಗಿರುವಂತೆ ನೋಡಿಕೊಳ್ಳುವ ಅವರ ಉದ್ದೇಶ, ಕಾರಣ, ಪ್ರೇರಣೆ ಏನು? ಇದರ ಹಿಂದೆ ದೊಡ್ಡ ಸಂಚಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>