ಗಲಭೆ ವೇಳೆ ಮೈನ್ ಕಾರವಾಲ್ ನಗರ ರಸ್ತೆಯಲ್ಲಿ ಗುಂಪೊಂದು ಕಲ್ಲು ತೂರಾಟ ನಡೆಸುತ್ತಿತ್ತು ಎಂದು ಪೊಲೀಸ್ ಕಾನ್ಸ್ಟೇಬಲ್ ಸಂಗ್ರಾಮ್ ಸಿಂಗ್ ಎಂಬುವವರು ನೀಡಿದ್ದ ಹೇಳಿಕೆ ಆಧರಿಸಿ ಉಮರ್, ಸೈಫಿ ಸೇರಿ ಹಲವರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಇದಕ್ಕೆ ಸಂಬಂಧಿಸಿದ ತನಿಖೆಯನ್ನು ಬಳಿಕ ಕ್ರೈಂ ಬ್ರಾಂಚ್ಗೆ ವರ್ಗಾಯಿಸಲಾಗಿತ್ತು.