‘ತಮಿಳುನಾಡು ಚುನಾವಣೆ ಬಿಜೆಪಿಗೆ ಪ್ರತಿಷ್ಠೆಯ ವಿಷಯವಾಗಿದ್ದು, ಕೊನೆಯವರೆಗೂ ಮೈತ್ರಿಗಾಗಿ ಪಕ್ಷ ಕಾಯಲಾರದು. ಬಿಜೆಪಿ ಜೊತೆ ಹೊಂದಾಣಿಕೆ ಬಗ್ಗೆ ಎಐಎಡಿಎಂಕೆಯಲ್ಲಿ ಗೊಂದಲಗಳಿದ್ದರೂ, ಪಕ್ಷದ ಎದುರಿಗಿರುವ ಆಯ್ಕೆಗಳು ಕಡಿಮೆ. ಮೈತ್ರಿಗೆ ಬಿಜೆಪಿ ಒಲವು ವ್ಯಕ್ತಪಡಿಸಿದ್ದು, ಬಹುತೇಕ ಅಂತಿಮಗೊಳ್ಳಲಿದೆ. ಅಮಿತ್ ಶಾ ಭೇಟಿಯಲ್ಲಿ ಅದಕ್ಕೊಂದು ಸ್ಪಷ್ಟ ರೂಪು ಸಿಗಲಿದೆ’ ಎಂದು ಎಐಎಡಿಎಂಕೆ ಪಕ್ಷದ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ.