2017ರ ವಿಧಾನಸಭಾ ಚುನಾವಣೆಯ ವೇಳೆ, ಆಗ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಗೃಹ ಸಚಿವ ಅಮತ್ ಶಾ ಅವರು ಈ ಬೂತ್ ನಿರ್ವಹಣಾ ಸೂತ್ರವನ್ನು ಅನುಷ್ಠಾನಗೊಳಿಸಿದ್ದರು. ಅಷ್ಟೇ ಅಲ್ಲ, ಬೂತ್ ಮಟ್ಟದ ಕಾರ್ಯಕರ್ತರ ಮನೆಗಳಿಗೂ ಭೇಟಿ ನೀಡಿದ್ದರು. ರಾಜ್ಯದ ಬೇರೆ ಬೇರೆ ಭಾಗಗಳಿಗೆ ತೆರಳಿ, ಬೂತ್ ಮಟ್ಟದ ಸಭೆಗಳಲ್ಲಿ ಅವರು ಭಾಗವಹಿಸಿದ್ದರು.