<p><strong>ನವದೆಹಲಿ: </strong>ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಸೋಂಕು ಹರಡುವಿಕೆಯ ಪ್ರಮಾಣದಲ್ಲಿ ದಿನೇದಿನೇ ತೀವ್ರ ಸ್ವರೂಪದ ಇಳಿಕೆ ಕಂಡುಬಂದಿದ್ದು, ಶನಿವಾರ ಕೇವಲ 213 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.</p>.<p>ಕೊರೊನಾ ದ್ವಿತೀಯ ಅಲೆ ಆರಂಭ ಆದಾಗನಿಂದ, ಇದುವರೆಗಿನ ಮೂರು ತಿಂಗಳ ಅವಧಿಯಲ್ಲಿ ಮೊದಲ ಬಾರಿಗೆ ಹೊಸ ಪ್ರಕರಣಗಳ ಸಂಖ್ಯೆ ಕನಿಷ್ಠ ಮಟ್ಟಕ್ಕೆ ಇಳಿದಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,610ಕ್ಕೆ ಇಳಿದಿರುವುದು ಸಾರ್ವಜನಿಕರ ಆತಂಕ ಕಡಿಮೆ ಮಾಡಿದೆ.</p>.<p>ಶನಿವಾರ ಸಂಜೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ಪರೀಕ್ಷೆಗೆ ಒಳಪಟ್ಟಿರುವ ಒಟ್ಟು 71,513 ಜನರಲ್ಲಿ ಶೇ 0.30ರ ಪ್ರಮಾಣದಲ್ಲಿ ಸೋಂಕು ದೃಢಪಟ್ಟಿದೆ.</p>.<p>ಇದೇ ಅವಧಿಯಲ್ಲಿ 497 ಜನ ಗುಣಮುಖರಾಗಿದ್ದಾರೆ. 28 ಜನ ಚಿಕಿತ್ಸೆಗೆ ಸ್ಪಂದಿಸದೆ ಪ್ರಾಣ ಕಳೆದುಕೊಂಡಿದ್ದು, ಸಾವಿಗೀಡಾದವರ ಒಟ್ಟು ಸಂಖ್ಯೆ 24,800 ತಲುಪಿದೆ.</p>.<p>2020ರ ಮಾರ್ಚ್ನಿಂದ ಇದುವರೆಗೆ 14,30,884 ಜನರಲ್ಲಿ ಸೋಂಕು ಪತ್ತೆಯಾಗಿದ್ದರೆ, 14,02,424 ಜನ ಗುಣಮುಖರಾಗಿದ್ದಾರೆ.</p>.<p>ಏಪ್ರಿಲ್ 16ರಿಂದ ಜಾರಿಗೊಳಿಸಲಾಗಿದ್ದ ಲಾಕ್ಡೌನ್ ಅನ್ನು ಕಳೆದ ಸೋಮವಾರದಿಂದ ಭಾಗಶಃ ತೆರವುಗೊಳಿಸಲಾಗಿದ್ದು, ಮಾರುಕಟ್ಟೆಗಳಲ್ಲಿನ ಅಂಗಡಿಗಳನ್ನು ಸಮ–ಬೆಸ ಸಂಖ್ಯೆಯ ಆಧಾರದಲ್ಲಿ ತೆರೆಯಲು ಅವಕಾಶ ನೀಡಲಾಗಿದೆ. ಸಾರ್ವಜನಿಕರಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದ್ದು, ಬೀದಿ–ಬೀದಿಗಳಲ್ಲಿ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾಗಿದೆ.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/karnataka-reports-9785-new-covid-infections-144-deaths-today-838333.html" target="_blank">Covid-19 Karnataka Update: 9,785 ಹೊಸ ಪ್ರಕರಣ, 144 ಮಂದಿ ಸಾವು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಸೋಂಕು ಹರಡುವಿಕೆಯ ಪ್ರಮಾಣದಲ್ಲಿ ದಿನೇದಿನೇ ತೀವ್ರ ಸ್ವರೂಪದ ಇಳಿಕೆ ಕಂಡುಬಂದಿದ್ದು, ಶನಿವಾರ ಕೇವಲ 213 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.</p>.<p>ಕೊರೊನಾ ದ್ವಿತೀಯ ಅಲೆ ಆರಂಭ ಆದಾಗನಿಂದ, ಇದುವರೆಗಿನ ಮೂರು ತಿಂಗಳ ಅವಧಿಯಲ್ಲಿ ಮೊದಲ ಬಾರಿಗೆ ಹೊಸ ಪ್ರಕರಣಗಳ ಸಂಖ್ಯೆ ಕನಿಷ್ಠ ಮಟ್ಟಕ್ಕೆ ಇಳಿದಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,610ಕ್ಕೆ ಇಳಿದಿರುವುದು ಸಾರ್ವಜನಿಕರ ಆತಂಕ ಕಡಿಮೆ ಮಾಡಿದೆ.</p>.<p>ಶನಿವಾರ ಸಂಜೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ಪರೀಕ್ಷೆಗೆ ಒಳಪಟ್ಟಿರುವ ಒಟ್ಟು 71,513 ಜನರಲ್ಲಿ ಶೇ 0.30ರ ಪ್ರಮಾಣದಲ್ಲಿ ಸೋಂಕು ದೃಢಪಟ್ಟಿದೆ.</p>.<p>ಇದೇ ಅವಧಿಯಲ್ಲಿ 497 ಜನ ಗುಣಮುಖರಾಗಿದ್ದಾರೆ. 28 ಜನ ಚಿಕಿತ್ಸೆಗೆ ಸ್ಪಂದಿಸದೆ ಪ್ರಾಣ ಕಳೆದುಕೊಂಡಿದ್ದು, ಸಾವಿಗೀಡಾದವರ ಒಟ್ಟು ಸಂಖ್ಯೆ 24,800 ತಲುಪಿದೆ.</p>.<p>2020ರ ಮಾರ್ಚ್ನಿಂದ ಇದುವರೆಗೆ 14,30,884 ಜನರಲ್ಲಿ ಸೋಂಕು ಪತ್ತೆಯಾಗಿದ್ದರೆ, 14,02,424 ಜನ ಗುಣಮುಖರಾಗಿದ್ದಾರೆ.</p>.<p>ಏಪ್ರಿಲ್ 16ರಿಂದ ಜಾರಿಗೊಳಿಸಲಾಗಿದ್ದ ಲಾಕ್ಡೌನ್ ಅನ್ನು ಕಳೆದ ಸೋಮವಾರದಿಂದ ಭಾಗಶಃ ತೆರವುಗೊಳಿಸಲಾಗಿದ್ದು, ಮಾರುಕಟ್ಟೆಗಳಲ್ಲಿನ ಅಂಗಡಿಗಳನ್ನು ಸಮ–ಬೆಸ ಸಂಖ್ಯೆಯ ಆಧಾರದಲ್ಲಿ ತೆರೆಯಲು ಅವಕಾಶ ನೀಡಲಾಗಿದೆ. ಸಾರ್ವಜನಿಕರಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದ್ದು, ಬೀದಿ–ಬೀದಿಗಳಲ್ಲಿ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾಗಿದೆ.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/karnataka-reports-9785-new-covid-infections-144-deaths-today-838333.html" target="_blank">Covid-19 Karnataka Update: 9,785 ಹೊಸ ಪ್ರಕರಣ, 144 ಮಂದಿ ಸಾವು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>