ಈಗಿರುವ ಮಾಹಿತಿ ಪ್ರಕಾರ, ಜಾಕಿರ್ ಹುಸೇನ್ ಮುನ್ಸಿಪಲ್ ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆಯಲ್ಲಿ ಉಂಟಾದ ವ್ಯತ್ಯಯದಿಂದಾಗಿ 22 ಮಂದಿ ಸಾವನ್ನಪ್ಪಿದ್ದಾರೆ. ಮೃತಪಟ್ಟ ಅಷ್ಟೂ ರೋಗಿಗಳಿಗೆ ವೆಂಟಿಲೇಟರ್ ನೆರವಿನೊಂದಿಗೆ ಚಿಕಿತ್ಸೆ ನೀಡುವ ಜೊತೆಗೆ, ಆಮ್ಲಜನಕವನ್ನು ಪೂರೈಸಲಾಗುತ್ತಿತ್ತು. ಆಮ್ಲಜನಕ ಟ್ಯಾಂಕ್ನಲ್ಲಿ ಸೋರಿಕೆಯಾದ ಕಾರಣ, ರೋಗಿಗಳಿಗೆ ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಾಸವಾದ ಕಾರಣ ಈ ದುರ್ಘಟನೆ ಸಂಭವಿಸಿದೆ‘ ಎಂದು ಜಿಲ್ಲಾಧಿಕಾರಿ ಸುದ್ದಿಗಾರರಿಗೆ ತಿಳಿಸಿದರು.