ಜೈಪುರ: ಆಹಾರದ ಆಮಿಷವೊಡ್ಡಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಆಂಬುಲೆನ್ಸ್ ಚಾಲಕ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ.
ಮಹಿಳೆಯನ್ನು ಆಂಬುಲೆನ್ಸ್ನಲ್ಲಿ ಕೂರಿಸಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿರುವ ಚಾಲಕ ಸಹಚರರ ಜೊತೆ ಸೇರಿ ದುಷ್ಕೃತ್ಯ ಎಸಗಿದ್ದಾನೆ ಎಂದು ಮೋತಿ ದೂಂಗ್ರಿ ಠಾಣಾಧಿಕಾರಿ ಸುರೇಂದ್ರ ಪಾಂಚೋಲಿ ಹೇಳಿದ್ದಾರೆ.
ಮಹಿಳೆಯ ದೂರಿನ ಆಧಾರದ ಮೇಲೆ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 ಡಿ (ಸಾಮೂಹಿಕ ಅತ್ಯಾಚಾರ) ಮತ್ತು ಎಸ್ಸಿ / ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
ಆಂಬುಲೆನ್ಸ್ ಚಾಲಕ ಮತ್ತು ಆತನ ಸ್ನೇಹಿತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಠಾಣಾಧಿಕಾರಿ ತಿಳಿಸಿದ್ದಾರೆ.
ಮಹಿಳೆಯ ಹೇಳಿಕೆಯನ್ನು ದಾಖಲಿಸಲಾಗಿದ್ದು, ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ.