ಪ್ರಶ್ನೋತ್ತರ ಅವಧಿಯಲ್ಲಿ ಉತ್ತರಿಸಿದ ಅವರು, ‘ವಿದ್ಯಾರ್ಥಿಗಳ ಮೇಲಾಗುವ ಕಿರುಕುಳ ಮತ್ತು ತಾರತಮ್ಯದ ವಿಚಾರವಾಗಿ ಪರಿಶೀಲನೆ ನಡೆಸಲು ಕೇಂದ್ರ ಸರ್ಕಾರ ಮತ್ತು ವಿಶ್ವವಿದ್ಯಾಲಯ ಅನುದಾನ ಆಯೋಗವು (ಯುಜಿಸಿ) ಅಧ್ಯಯನ ನಡೆಸಿದೆ.ವಿದ್ಯಾರ್ಥಿಗಳು ಶೈಕ್ಷಣಿಕ ಒತ್ತಡದಿಂದ ಹೊರಬರಲು ಶಿಕ್ಷಣ ಸಚಿವಾಲಯವು ಪ್ರಾದೇಶಿಕ ಭಾಷೆಗಳಲ್ಲಿ ಆಪ್ತ ಸಮಾಲೋಚನೆ, ತಾಂತ್ರಿಕ ಶಿಕ್ಷಣದಂತಹ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಕೋವಿಡ್ ಸಂದಿಗ್ಧ ಕಾಲದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಕುಟುಂಬದ ಮಾನಸಿಕ ಸದೃಢತೆಗಾಗಿ ಕೇಂದ್ರ ಸರ್ಕಾರವು ಮನೋದರ್ಪಣ ಹೆಸರಿನ ಯೋಜನೆ ಮೂಲಕ ಹಲವು ಚಟುವಟಿಕೆಗಳನ್ನು ಕೈಗೊಂಡಿದೆ’ ಎಂದರು.