<p><strong>ನವದೆಹಲಿ</strong>: ದಟ್ಟ ಮಂಜಿನಿಂದ ಕೂಡಿದ ವಾತಾವರಣವಿದ್ದ ಕಾರಣ 260ಕ್ಕೂ ಹೆಚ್ಚು ರೈಲುಗಳ ಸಂಚಾರವನ್ನು ಸೋಮವಾರ ರದ್ದುಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p>82 ಎಕ್ಸ್ಪ್ರೆಸ್ ರೈಲುಗಳ, 140 ಪ್ಯಾಸೆಂಜರ್ ರೈಲುಗಳ ಮತ್ತು 40 ಉಪನಗರ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ ಎಂದೂ ವಿವರಿಸಿದ್ದಾರೆ.</p>.<p><strong>ಉತ್ತರ ಭಾರತದಲ್ಲಿ ತೀವ್ರ ಚಳಿ (ಪಿಟಿಐ ವರದಿ): </strong>ಉತ್ತರ ಮತ್ತು ವಾಯವ್ಯ ಭಾರತದಲ್ಲಿ ಅತಿಯಾದ ಚಳಿ ಹಾಗೂ ದಟ್ಟ ಮಂಜು ಮುಸುಕಿದ ವಾತಾವರಣ ಮುಂದುವರಿದಿದೆ.</p>.<p>ಉತ್ತರಪ್ರದೇಶದ ಉನ್ನಾವ್ನಲ್ಲಿ ಬಸ್ಸೊಂದು ಟ್ರಕ್ಗೆ ಡಿಕ್ಕಿಯಾಗಿ ನಾಲ್ವರು ಮೃತಪಟ್ಟಿದ್ದಾರೆ.</p>.<p>ದೆಹಲಿಯಲ್ಲಿ ಐದನೇ ದಿನವೂ ಶೀತಗಾಳಿ ಮುಂದುವರಿದಿದ್ದು, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡಕ್ಕಿಂತ ಕಡಿಮೆ ಉಷ್ಣಾಂಶ ದಾಖಲಾಗಿದೆ.</p>.<p>30 ವಿಮಾನಗಳ ಸಂಚಾರ ವಿಳಂಬವಾಗಿದೆ ಎಂದು ದೆಹಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಒಡಿಶಾದಲ್ಲೂ ಶೀತಗಾಳಿ ಬೀಸುತ್ತಿದ್ದು, ಸಿಮಿಲಿಗುಡದಲ್ಲಿ 3.7 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಜಮ್ಮು ಮತ್ತು ಕಾಶ್ಮೀರದ ಗುಲ್ಮಾರ್ಗ್, ಸೋನಮಾರ್ಗ್ ಮೊದಲಾದೆಡೆ ಹಿಮಪಾತ ಹೆಚ್ಚಾಗಿದೆ ಎಂದೂ ಹೇಳಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದಟ್ಟ ಮಂಜಿನಿಂದ ಕೂಡಿದ ವಾತಾವರಣವಿದ್ದ ಕಾರಣ 260ಕ್ಕೂ ಹೆಚ್ಚು ರೈಲುಗಳ ಸಂಚಾರವನ್ನು ಸೋಮವಾರ ರದ್ದುಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p>82 ಎಕ್ಸ್ಪ್ರೆಸ್ ರೈಲುಗಳ, 140 ಪ್ಯಾಸೆಂಜರ್ ರೈಲುಗಳ ಮತ್ತು 40 ಉಪನಗರ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ ಎಂದೂ ವಿವರಿಸಿದ್ದಾರೆ.</p>.<p><strong>ಉತ್ತರ ಭಾರತದಲ್ಲಿ ತೀವ್ರ ಚಳಿ (ಪಿಟಿಐ ವರದಿ): </strong>ಉತ್ತರ ಮತ್ತು ವಾಯವ್ಯ ಭಾರತದಲ್ಲಿ ಅತಿಯಾದ ಚಳಿ ಹಾಗೂ ದಟ್ಟ ಮಂಜು ಮುಸುಕಿದ ವಾತಾವರಣ ಮುಂದುವರಿದಿದೆ.</p>.<p>ಉತ್ತರಪ್ರದೇಶದ ಉನ್ನಾವ್ನಲ್ಲಿ ಬಸ್ಸೊಂದು ಟ್ರಕ್ಗೆ ಡಿಕ್ಕಿಯಾಗಿ ನಾಲ್ವರು ಮೃತಪಟ್ಟಿದ್ದಾರೆ.</p>.<p>ದೆಹಲಿಯಲ್ಲಿ ಐದನೇ ದಿನವೂ ಶೀತಗಾಳಿ ಮುಂದುವರಿದಿದ್ದು, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡಕ್ಕಿಂತ ಕಡಿಮೆ ಉಷ್ಣಾಂಶ ದಾಖಲಾಗಿದೆ.</p>.<p>30 ವಿಮಾನಗಳ ಸಂಚಾರ ವಿಳಂಬವಾಗಿದೆ ಎಂದು ದೆಹಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಒಡಿಶಾದಲ್ಲೂ ಶೀತಗಾಳಿ ಬೀಸುತ್ತಿದ್ದು, ಸಿಮಿಲಿಗುಡದಲ್ಲಿ 3.7 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಜಮ್ಮು ಮತ್ತು ಕಾಶ್ಮೀರದ ಗುಲ್ಮಾರ್ಗ್, ಸೋನಮಾರ್ಗ್ ಮೊದಲಾದೆಡೆ ಹಿಮಪಾತ ಹೆಚ್ಚಾಗಿದೆ ಎಂದೂ ಹೇಳಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>