ರಾಮಚಂದ್ರ ಭಾರತಿ ಅಲಿಯಾಸ್ ಸತಿಶ್ ಶರ್ಮಾ, ನಂದಕುಮಾರ್ ಮತ್ತು ಸಿಂಹಯಾಜಿ ಸ್ವಾಮಿ ಅವರ ಜಾಮೀನು ಕೋರಿಕೆ ಅರ್ಜಿಗಳನ್ನು ಕೋರ್ಟ್ ಪರಿಗಣಿಸಿತು.ಮೂವರು ಆರೋಪಿಗಳಿಗೂ ತಲಾ ₹3 ಲಕ್ಷದ ವೈಯಕ್ತಿಕ ಬಾಂಡ್ ಜತೆಗೆ ಇಬ್ಬರ ಶ್ಯೂರಿಟಿ ನೀಡಬೇಕು, ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಎದುರು ಪ್ರತಿ ಸೋಮವಾರ ಹಾಜರಾಗಬೇಕು ಎನ್ನುವ ಷರತ್ತುಗಳನ್ನು ಕೋರ್ಟ್ ವಿಧಿಸಿದೆ.