ಮುಖ್ಯಮಂತ್ರಿ ಅವರು ಇಲ್ಲಿನ ಶ್ಯಾಮ್ಪ್ರಸಾದ್ ಮುಖರ್ಜಿ ಲೇನ್ಲ್ಲಿರುವ ತಮ್ಮ ಅಧಿಕೃತ ನಿವಾಸದ ಸಮೀಪ ಗುರುವಾರ ಸಂಜೆ ವಾಯುವಿಹಾರ ಮಾಡುತ್ತಿದ್ದಾಗ, ಈ ಮೂವರು ವ್ಯಕ್ತಿಗಳು ಭದ್ರತೆಯನ್ನು ಭೇದಿಸಿ, ಮುಖ್ಯಮಂತ್ರಿ ಅವರ ಮೇಲೆ ಕಾರು ಹತ್ತಿಸಲು ಪ್ರಯತ್ನಿಸಿದರು. ಈ ವೇಳೆ ಮುಖ್ಯಮಂತ್ರಿಯವರು ಮಿಂಚಿನ ವೇಗದಲ್ಲಿ ಪಕ್ಕಕ್ಕೆ ಜಿಗಿದರು. ಈ ಘಟನೆಯಲ್ಲಿ ಭದ್ರತಾ ಸಿಬ್ಬಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದರು.