<p><strong>ಕೋಲ್ಕತ್ತ</strong>: ಅಪಾರ ಪ್ರಮಾಣದ ಸ್ಫೋಟಕ ಮತ್ತು ಮದ್ದುಗುಂಡುಗಳನ್ನು ಸಾಗಿಸುತ್ತಿದ್ದ ಮೂವರು ವ್ಯಕ್ತಿಗಳನ್ನು ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆಗಿಳಿದ ಪಶ್ಚಿಮ ಬಂಗಾಳದ ವಿಶೇಷ ಕಾರ್ಯ ಪಡೆ(ಎಸ್ಟಿಎಫ್) ಪೊಲೀಸರು, ಕೋಲ್ಕತ್ತದಿಂದ 30 ಕಿ.ಮೀ ದೂರದ ಶಹಾಸನ್ ಎಂಬಲ್ಲಿ ಈ ಮೂವರನ್ನು ಬಂಧಿಸಿದ್ದಾರೆ. ಬಂಧಿತರಿಂದ 10 ಕೆ.ಜಿ ಸ್ಫೋಟಕಗಳು, ಶಸ್ತ್ರಾಸ್ತ್ರದೊಂದಿಗೆ 20 ಸುತ್ತು ಮದ್ದುಗುಂಡುಗಳು ಹಾಗೂ ₹40ಸಾವಿರ ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.</p>.<p>’ಬಂಧಿತರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಇವರ ಹಿಂದೆ ಯಾರಿದ್ದಾರೆ, ಯಾರಿಗಾಗಿ ಈ ಸ್ಪೋಟಗಳನ್ನು ಸಾಗಿಸುತ್ತಿದ್ದರು ಎಂಬುದರ ಬಗ್ಗೆ ಪ್ರಶ್ನಿಸಲಾಗುತ್ತಿದೆ. ಇವರಿಗೆ ಅಂತರರಾಜ್ಯ ಅಥವಾ ಅಂತರರಾಷ್ಟ್ರೀಯ ಭಯೋತ್ಪಾದಕ ಗುಂಪುಗಳೊಂದಿಗೆ ಸಂಪರ್ಕವಿದೆಯೇ ಎಂಬುದನ್ನು ಪತ್ತೆ ಮಾಡಲು ಪ್ರಯತ್ನಿಸುತ್ತಿದ್ದೇವೆ’ ಎಂದು ಹೇಳಿದರು.</p>.<p>ಕೋಲ್ಕತ್ತದಲ್ಲಿ ಭಾನುವಾರ ಬಂಧಿತರಾಗಿರುವ ಜೆಎಂಬಿ ಭಯೋತ್ಪಾದಕರೊಂದಿಗೆ ಸಂಪರ್ಕವಿರುವುದೆಯೇ ಎಂಬುದನ್ನು ತಿಳಿದುಕೊಳ್ಳಲು ಪ್ರಯತ್ನಿಸಲಾಗುತ್ತಿದೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಅಪಾರ ಪ್ರಮಾಣದ ಸ್ಫೋಟಕ ಮತ್ತು ಮದ್ದುಗುಂಡುಗಳನ್ನು ಸಾಗಿಸುತ್ತಿದ್ದ ಮೂವರು ವ್ಯಕ್ತಿಗಳನ್ನು ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆಗಿಳಿದ ಪಶ್ಚಿಮ ಬಂಗಾಳದ ವಿಶೇಷ ಕಾರ್ಯ ಪಡೆ(ಎಸ್ಟಿಎಫ್) ಪೊಲೀಸರು, ಕೋಲ್ಕತ್ತದಿಂದ 30 ಕಿ.ಮೀ ದೂರದ ಶಹಾಸನ್ ಎಂಬಲ್ಲಿ ಈ ಮೂವರನ್ನು ಬಂಧಿಸಿದ್ದಾರೆ. ಬಂಧಿತರಿಂದ 10 ಕೆ.ಜಿ ಸ್ಫೋಟಕಗಳು, ಶಸ್ತ್ರಾಸ್ತ್ರದೊಂದಿಗೆ 20 ಸುತ್ತು ಮದ್ದುಗುಂಡುಗಳು ಹಾಗೂ ₹40ಸಾವಿರ ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.</p>.<p>’ಬಂಧಿತರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಇವರ ಹಿಂದೆ ಯಾರಿದ್ದಾರೆ, ಯಾರಿಗಾಗಿ ಈ ಸ್ಪೋಟಗಳನ್ನು ಸಾಗಿಸುತ್ತಿದ್ದರು ಎಂಬುದರ ಬಗ್ಗೆ ಪ್ರಶ್ನಿಸಲಾಗುತ್ತಿದೆ. ಇವರಿಗೆ ಅಂತರರಾಜ್ಯ ಅಥವಾ ಅಂತರರಾಷ್ಟ್ರೀಯ ಭಯೋತ್ಪಾದಕ ಗುಂಪುಗಳೊಂದಿಗೆ ಸಂಪರ್ಕವಿದೆಯೇ ಎಂಬುದನ್ನು ಪತ್ತೆ ಮಾಡಲು ಪ್ರಯತ್ನಿಸುತ್ತಿದ್ದೇವೆ’ ಎಂದು ಹೇಳಿದರು.</p>.<p>ಕೋಲ್ಕತ್ತದಲ್ಲಿ ಭಾನುವಾರ ಬಂಧಿತರಾಗಿರುವ ಜೆಎಂಬಿ ಭಯೋತ್ಪಾದಕರೊಂದಿಗೆ ಸಂಪರ್ಕವಿರುವುದೆಯೇ ಎಂಬುದನ್ನು ತಿಳಿದುಕೊಳ್ಳಲು ಪ್ರಯತ್ನಿಸಲಾಗುತ್ತಿದೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>