ಒಡಿಶಾ ಮತ್ತು ಆಂಧ್ರಪ್ರದೇಶ ಗಡಿಭಾಗದ ಕೆರಿಮಿಟಿ ಹಳ್ಳಿಯ ಸಮೀಪದ ಅರಣ್ಯ ಪ್ರದೇಶದಲ್ಲಿ ಯೋಧರು ಕಾರ್ಯಾಚರಣೆ ನಡೆಸುತ್ತಿರುವುದನ್ನು ಖಚಿತಪಡಿಸಿಕೊಂಡ ಮಾವೊವಾದಿಗಳು, ಅವರ ಮೇಲೆ ಗುಂಡು ಹಾರಿಸಿದರು. ಭದ್ರತಾ ಪಡೆಗಳು ಪ್ರತಿ ಗುಂಡಿನ ದಾಳಿ ನಡೆಸಿದರು.ಈ ಸಂಘರ್ಷದಲ್ಲಿ ಮೂವರು ಮಾವೊವಾದಿಗಳು ಸ್ಥಳದಲ್ಲೇ ಮೃತಪಟ್ಟರು ಎಂದು ಅವರು ತಿಳಿಸಿದರು.