ಶುಕ್ರವಾರ, ಮಾರ್ಚ್ 31, 2023
22 °C

ಕಾಶ್ಮೀರದಲ್ಲಿ ಕಳೆದ ವರ್ಷ 30 ನಾಗರಿಕರು, 31 ಭದ್ರತಾ ಸಿಬ್ಬಂದಿ ಸಾವು -ನಿತ್ಯಾನಂದ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ (ಪಿಟಿಐ): ಜಮ್ಮು ಮತ್ತು ಕಾಶ್ಮೀರದಲ್ಲಿ 2022ರಲ್ಲಿ ನಡೆದ ಉಗ್ರರ ದಾಳಿಯಲ್ಲಿ 30 ನಾಗರಿಕರು ಮತ್ತು 31 ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರದ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಮಂಗಳವಾರ ಲೋಕಸಭೆಯಲ್ಲಿ ನೀಡಿದ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

2023ರ ಮೊದಲ ತಿಂಗಳಿನಲ್ಲಿ 7 ಮಂದಿ ನಾಗರಿಕರು ಮತ್ತು ಇತರ 23 ಜನ ಗಾಯಗೊಂಡಿದ್ದಾರೆ ಎಂದೂ ಅವರು ತಿಳಿಸಿದರು.

ಸರ್ಕಾರವು ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣುತೆಯ ನೀತಿಯನ್ನು ಹೊಂದಿದೆ. ಅಲ್ಲದೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪರಿಸ್ಥಿತಿ ಸುಧಾರಣೆಯಾಗಿದೆ ಎಂದರು.

2021ರಲ್ಲಿ 41 ನಾಗರಿಕರು, 42 ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದು, ಇತರ 192 ಮಂದಿ ಗಾಯಗೊಂಡಿದ್ದಾರೆ ಎಂದು ವಿವರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು