ಮುಜಾಫ್ಫರ್ನಗರ: ಉತ್ತರಪ್ರದೇಶದಲ್ಲಿ 30 ವರ್ಷದ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಶುಕ್ರವಾರ ಕಲ್ಲಿನಿಂದ ಹೊಡೆದು ಹತ್ಯೆ ಮಾಡಿದ್ದಾರೆ.
‘ಈ ಘಟನೆ ಶುಕ್ರವಾರ ಸಂಜೆ ನಡೆದಿದೆ. ಅನುಜ್ ಕುಮಾರ್ ಎಂಬ ರೈತ,ಕಜಿಕೇಡಾ ಗ್ರಾಮದಲ್ಲಿರುವ ತನ್ನ ಹೊಲಕ್ಕೆ ಹೋಗಿದ್ದಾಗ ದುಷ್ಕರ್ಮಿಗಳು ಅವರನ್ನು ಕಲ್ಲಿನಿಂದ ಹೊಡೆದು ಕೊಂದಿದ್ದಾರೆ’ ಎಂದು ಪೊಲೀಸರು ತಿಳಿಸಿದರು.
‘ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ. ಅನುಜ್ ಮೃತ ಶರೀರವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ’ ಎಂದು ತಿತಾವಿ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿ ರಾಧೆಶಾಮ್ ಹೇಳಿದರು.