ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಇಲ್ಲಿ ನಾವು ಸುರಕ್ಷಿತವಲ್ಲ’: ಕಾಶ್ಮೀರಿ ಪಂಡಿತ ನೌಕರ ವರ್ಗ ಸಾಮೂಹಿಕ ರಾಜೀನಾಮೆ

ಅಕ್ಷರ ಗಾತ್ರ

ಕಾಶ್ಮೀರ: ‘ಪ್ರಧಾನ ಮಂತ್ರಿಗಳ ಉದ್ಯೋಗ ಪ್ಯಾಕೇಜ್’ ಅಡಿಯಲ್ಲಿ ಕಾಶ್ಮೀರದ ಸರ್ಕಾರಿ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸುಮಾರು 350 ಕಾಶ್ಮೀರಿ ಪಂಡಿತರ ವರ್ಗ ತಮ್ಮ ಹುದ್ದೆಗಳಿಗೆ ಶುಕ್ರವಾರ ಸಾಮೂಹಿಕ ರಾಜೀನಾಮೆ ನೀಡಿರುವುದಾಗಿ ವರದಿಯಾಗಿದೆ.

ಜಮ್ಮು ಮತ್ತು ಕಾಶ್ಮಿರದ ಲೆಫ್ಟಿನೆಂಟ್ ಗವರ್ನರ್ (ಎಲ್‌ಜೆ) ಮನೋಜ್ ಸಿನ್ಹಾ ಅವರಿಗೆ ರಾಜೀನಾಮೆ ಪತ್ರ ರವಾನಿಸಲಾಗಿದೆ.

‘ಪ್ರಧಾನ ಮಂತ್ರಿ ಉದ್ಯೋಗ ಪ್ಯಾಕೇಜ್‌’ ಅಡಿ ಕಳೆದ 12 ವರ್ಷಗಳಿಂದ ಕಣಿವೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲಾ ಕಾಶ್ಮೀರಿ ಪಂಡಿತ ಅಲ್ಪಸಂಖ್ಯಾತರಿಗೆ ಭದ್ರತಾ ಭಾವ ಒದಗಿಸುವಲ್ಲಿ ಆಡಳಿತ ವಿಫಲವಾಗಿದೆ. ‘ಕಾಶ್ಮೀರದಲ್ಲಿ ನಾವು ಸುರಕ್ಷಿತವಾಗಿಲ್ಲ’ ಎಂದು ನೌಕರ ವರ್ಗ ಪತ್ರದಲ್ಲಿ ಉಲ್ಲೇಖಿಸಿದೆ.

‘ನೌಕರೆಲ್ಲರೂ ಸಾಮೂಹಿಕ ರಾಜೀನಾಮೆ ನೀಡುವುದನ್ನು ಹೊರತುಪಡಿಸಿ, ನಮಗೆ ಯಾವುದೇ ಆಯ್ಕೆಯಿಲ್ಲ. ಇದು ನಮ್ಮ ಜೀವಗಳನ್ನು ಉಳಿಸಿಕೊಳ್ಳಲು ಇರುವ ಏಕೈಕ ಮಾರ್ಗೋಪಾಯ’ ಎಂದು ಪತ್ರದಲ್ಲಿ ಹೇಳಲಾಗಿದೆ.

ಕಾಶ್ಮೀರಿ ಪಂಡಿತರಾದ ಸರ್ಕಾರಿ ನೌಕರ ರಾಹುಲ್ ಭಟ್ ಅವರನ್ನು ಬುದ್ಗಾವ್‌ನ ತಹಸೀಲ್‌ ಕಚೇರಿಯಲ್ಲಿ ಭಯೋತ್ಪಾದಕರು ಗುಂಡಿಕ್ಕಿ ಕೊಂದ ಘಟನೆಗೆ ಪ್ರತಿಭಟನಾರ್ಥವಾಗಿ ಈ ಬೆಳವಣಿಗೆ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT