<p><strong>ಚಂಡೀಗಢ:</strong> ಸ್ವಯಂಘೋಷಿತ ಧರ್ಮಬೋಧಕ ಮತ್ತು ಪ್ರತ್ಯೇಕ ಖಾಲಿಸ್ಥಾನ ರಾಷ್ಟ್ರದ ಪ್ರತಿಪಾದಕ ಅಮೃತ್ಪಾಲ್ ಸಿಂಗ್ ಪರಾರಿಯಾಗಲು ನೆರವಾದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.</p>.<p>ಅಮೃತ್ಪಾಲ್ ಜಲಂಧರ್ನ ನಂಗಲ್ ಆ್ಯಂಬಿಯಾನ್ ಗ್ರಾಮದಲ್ಲಿರುವ ಗುರುದ್ವಾರಕ್ಕೆ ತೆರಳಿದ್ದ. ಆತ ಕಾರಿನಲ್ಲಿ ತಪ್ಪಿಸಿಕೊಳ್ಳಲು ಬಂಧಿತ ನಾಲ್ವರು ನೆರವಾಗಿದ್ದರು ಎಂಬುದು ವಿಚಾರಣೆ ವೇಳೆ ತಿಳಿದುಬಂದಿರುವುದಾಗಿ ಪೊಲೀಸರು ಹೇಳಿದ್ದಾರೆ.</p>.<p>'ಅಲ್ಲಿ (ಗುರುದ್ವಾರದಲ್ಲಿ) ಆತ ತನ್ನ ಬಟ್ಟೆಗಳನ್ನು ಬದಲಿಸಿ ಪ್ಯಾಂಟ್ ಹಾಗೂ ಶರ್ಟ್ ಧರಿಸಿ, ಇತರ ಮೂವರೊಂದಿಗೆ ಬೈಕ್ನಲ್ಲಿ ಪರಾರಿಯಾಗಿದ್ದಾನೆ' ಎಂದು ಐಜಿಪಿ ಸುಖ್ಚೈನ್ ಸಿಂಗ್ ಗಿಲ್ ಮಾಧ್ಯದವರಿಗೆ ಮಾಹಿತಿ ನೀಡಿದ್ದಾರೆ.</p>.<p>ಅಮೃತ್ಪಾಲ್ ಹಾಗೂ ಆತನ 'ವಾರಿಸ್ ಪಂಜಾಬ್ ದೇ' ಸಂಘಟನೆ ವಿರುದ್ಧ ಪೊಲೀಸರು ಶನಿವಾರ ದಾಳಿ ನಡೆಸಿದ್ದರು. ಈ ವೇಳೆ ಅಮೃತ್ಪಾಲ್ ಪರಾರಿಯಾಗಿದ್ದ. ಈ ಸಂಬಂಧ ಮನ್ಪ್ರೀತ್ ಸಿಂಗ್ ಅಲಿಯಾಸ್ ಮನ್ನಾ, ಗುರ್ದೀಪ್ ಸಿಂಗ್ ಅಲಿಯಾಸ್ ದೀಪ, ಹರ್ಪ್ರೀತ್ ಸಿಂಗ್ ಅಲಿಯಾಸ್ ಹ್ಯಾಪಿ ಮತ್ತು ಗುರ್ಭೆಜ್ ಸಿಂಗ್ ಅಲಿಯಾಸ್ ಭೆಜಾ ಎಂಬವರನ್ನು ಬಂಧಿಸಲಾಗಿದೆ ಎಂದು ಗಿಲ್ ಹೇಳಿದ್ದಾರೆ.</p>.<p>ಪರಾರಿಯಾಗಲು ಬಳಸಿದ್ದ ಕಾರನ್ನು ವಶಕ್ಕೆ ಪಡೆಯಲಾಗಿದೆ. ಸ್ಥಳದಲ್ಲಿ ರೈಫಲ್ ಹಾಗೂ ಹರಿತವಾದ ಆಯುಧಗಳು, ವಾಕಿ–ಟಾಕಿ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.</p>.<p>ವಿವಿಧ ರೀತಿಯ ವೇಷದಲ್ಲಿರುವ ಅಮೃತ್ಪಾಲ್ನ ನಾಲ್ಕು ಚಿತ್ರಗಳನ್ನು ಬಿಡುಗಡೆ ಮಾಡಿರುವ ಪೊಲೀಸರು, ಆತನ ಪತ್ತೆ ಹಚ್ಚಲು ನೆರವಾಗುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.</p>.<p>ಅಮೃತ್ಪಾಲ್ ಸೆರೆ ಹಿಡಿಯಲು ಎಲ್ಲ ರೀತಿಯ ಪ್ರಯತ್ನ ನಡೆಸಲಾಗುತ್ತಿದೆ. ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಖುದ್ದಾಗಿ ಈ ಪ್ರಕರಣದ ಮೇಲೆ ಕಣ್ಣಿಟ್ಟಿದ್ದಾರೆ. ನಿರಂತರವಾಗಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ ಎಂದೂ ಗಿಲ್ ವಿವರಿಸಿದ್ದಾರೆ.</p>.<p>ಅಮೃತ್ಪಾಲ್ ಸಿಂಗ್ಗಾಗಿ ಶೋಧ ಮುಂದುವರಿಸಿರುವ ಪೊಲೀಸರು ಆತನ ಹಲವು ಬೆಂಬಲಿಗರನ್ನು ಬಂಧಿಸಿದ್ದಾರೆ. ಇಲ್ಲಿಯವರೆಗೂ ನೂರಕ್ಕೂ ಹೆಚ್ಚು ಜನರ ಬಂಧನವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ:</strong> ಸ್ವಯಂಘೋಷಿತ ಧರ್ಮಬೋಧಕ ಮತ್ತು ಪ್ರತ್ಯೇಕ ಖಾಲಿಸ್ಥಾನ ರಾಷ್ಟ್ರದ ಪ್ರತಿಪಾದಕ ಅಮೃತ್ಪಾಲ್ ಸಿಂಗ್ ಪರಾರಿಯಾಗಲು ನೆರವಾದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.</p>.<p>ಅಮೃತ್ಪಾಲ್ ಜಲಂಧರ್ನ ನಂಗಲ್ ಆ್ಯಂಬಿಯಾನ್ ಗ್ರಾಮದಲ್ಲಿರುವ ಗುರುದ್ವಾರಕ್ಕೆ ತೆರಳಿದ್ದ. ಆತ ಕಾರಿನಲ್ಲಿ ತಪ್ಪಿಸಿಕೊಳ್ಳಲು ಬಂಧಿತ ನಾಲ್ವರು ನೆರವಾಗಿದ್ದರು ಎಂಬುದು ವಿಚಾರಣೆ ವೇಳೆ ತಿಳಿದುಬಂದಿರುವುದಾಗಿ ಪೊಲೀಸರು ಹೇಳಿದ್ದಾರೆ.</p>.<p>'ಅಲ್ಲಿ (ಗುರುದ್ವಾರದಲ್ಲಿ) ಆತ ತನ್ನ ಬಟ್ಟೆಗಳನ್ನು ಬದಲಿಸಿ ಪ್ಯಾಂಟ್ ಹಾಗೂ ಶರ್ಟ್ ಧರಿಸಿ, ಇತರ ಮೂವರೊಂದಿಗೆ ಬೈಕ್ನಲ್ಲಿ ಪರಾರಿಯಾಗಿದ್ದಾನೆ' ಎಂದು ಐಜಿಪಿ ಸುಖ್ಚೈನ್ ಸಿಂಗ್ ಗಿಲ್ ಮಾಧ್ಯದವರಿಗೆ ಮಾಹಿತಿ ನೀಡಿದ್ದಾರೆ.</p>.<p>ಅಮೃತ್ಪಾಲ್ ಹಾಗೂ ಆತನ 'ವಾರಿಸ್ ಪಂಜಾಬ್ ದೇ' ಸಂಘಟನೆ ವಿರುದ್ಧ ಪೊಲೀಸರು ಶನಿವಾರ ದಾಳಿ ನಡೆಸಿದ್ದರು. ಈ ವೇಳೆ ಅಮೃತ್ಪಾಲ್ ಪರಾರಿಯಾಗಿದ್ದ. ಈ ಸಂಬಂಧ ಮನ್ಪ್ರೀತ್ ಸಿಂಗ್ ಅಲಿಯಾಸ್ ಮನ್ನಾ, ಗುರ್ದೀಪ್ ಸಿಂಗ್ ಅಲಿಯಾಸ್ ದೀಪ, ಹರ್ಪ್ರೀತ್ ಸಿಂಗ್ ಅಲಿಯಾಸ್ ಹ್ಯಾಪಿ ಮತ್ತು ಗುರ್ಭೆಜ್ ಸಿಂಗ್ ಅಲಿಯಾಸ್ ಭೆಜಾ ಎಂಬವರನ್ನು ಬಂಧಿಸಲಾಗಿದೆ ಎಂದು ಗಿಲ್ ಹೇಳಿದ್ದಾರೆ.</p>.<p>ಪರಾರಿಯಾಗಲು ಬಳಸಿದ್ದ ಕಾರನ್ನು ವಶಕ್ಕೆ ಪಡೆಯಲಾಗಿದೆ. ಸ್ಥಳದಲ್ಲಿ ರೈಫಲ್ ಹಾಗೂ ಹರಿತವಾದ ಆಯುಧಗಳು, ವಾಕಿ–ಟಾಕಿ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.</p>.<p>ವಿವಿಧ ರೀತಿಯ ವೇಷದಲ್ಲಿರುವ ಅಮೃತ್ಪಾಲ್ನ ನಾಲ್ಕು ಚಿತ್ರಗಳನ್ನು ಬಿಡುಗಡೆ ಮಾಡಿರುವ ಪೊಲೀಸರು, ಆತನ ಪತ್ತೆ ಹಚ್ಚಲು ನೆರವಾಗುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.</p>.<p>ಅಮೃತ್ಪಾಲ್ ಸೆರೆ ಹಿಡಿಯಲು ಎಲ್ಲ ರೀತಿಯ ಪ್ರಯತ್ನ ನಡೆಸಲಾಗುತ್ತಿದೆ. ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಖುದ್ದಾಗಿ ಈ ಪ್ರಕರಣದ ಮೇಲೆ ಕಣ್ಣಿಟ್ಟಿದ್ದಾರೆ. ನಿರಂತರವಾಗಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ ಎಂದೂ ಗಿಲ್ ವಿವರಿಸಿದ್ದಾರೆ.</p>.<p>ಅಮೃತ್ಪಾಲ್ ಸಿಂಗ್ಗಾಗಿ ಶೋಧ ಮುಂದುವರಿಸಿರುವ ಪೊಲೀಸರು ಆತನ ಹಲವು ಬೆಂಬಲಿಗರನ್ನು ಬಂಧಿಸಿದ್ದಾರೆ. ಇಲ್ಲಿಯವರೆಗೂ ನೂರಕ್ಕೂ ಹೆಚ್ಚು ಜನರ ಬಂಧನವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>